<p><strong>ಕಲಬುರ್ಗಿ</strong>: ಶುದ್ಧೀಕರಿಸಿದ ಚರಂಡಿ ನೀರನ್ನು ನಗರದಲ್ಲಿರುವ ಉದ್ಯಾನಗಳು ಹಾಗೂ ಕೆರೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ತಿಳಿಸಿದರು.</p>.<p>ನಗರದ ಸ್ವಚ್ಛತೆ, ಕುಡಿಯುವ ನೀರು ಪೂರೈಕೆ, ಕೊಳಚೆ ನೀರು ಸಂಸ್ಕರಣ ಘಟಕಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಶುದ್ಧೀಕರಿಸಿದ ನೀರನ್ನು ಮರಳಿ ಭೀಮಾ ನದಿಗೆ ಬಿಡುವ ಬಿಡಲಾಗುತ್ತಿತ್ತು. ಅದಕ್ಕೆ ನಾಗರಿಕರೂ ಬೇಸರ ವ್ಯಕ್ತಪಡಿಸಿದ್ದರು. ಹೀಗಾಗಿ, ಉದ್ಯಾನಗಳ ನಿರ್ವಹಣೆಗೆ ಬಳಸಲಾಗುವುದು ಎಂದರು.</p>.<p><strong>₹ 150 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ:</strong> ನಗರದಲ್ಲಿ ಹದಗೆಟ್ಟಿರುವ ಆಳಂದ ರಿಂಗ್ ರಸ್ತೆ, ತಾಜ ಸುಲ್ತಾನಪುರ ರಸ್ತೆ ಸೇರಿದಂತೆ ದುಃಸ್ಥಿತಿಯಲ್ಲಿ ರಸ್ತೆಗಳ ಅಭಿವೃದ್ಧಿಗೆ ₹ 150 ಕೋಟಿ ವೆಚ್ಚದ ಯೋಜನೆ ಸಿದ್ಧಪಡಿಸಲಾಗಿದೆ ಎಂದರು.</p>.<p><strong>ಸ್ಮಾರ್ಟ್ ಸಿಟಿ ಘೋಷಣೆ ಶೀಘ್ರ</strong>: ಕಲಬುರ್ಗಿ ಸೇರಿದಂತೆ ಇನ್ನೂ ನಾಲ್ಕು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ. ಕೋವಿಡ್ ನಿಂದಾಗಿ ದೆಹಲಿ ಪ್ರವಾಸ ಕೈಗೊಳ್ಳಲು ಸಾಧ್ಯವಾಗಿಲ್ಲ ಎಂದರು.</p>.<p>ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ನೇಮಕ ಮಾಡುವ ಬಗ್ಗೆ ಪ್ರಸ್ತಾವ ಬಂದಿಲ್ಲ. ಶಾಸಕರು ಹೆಸರನ್ನು ಅಂತಿಮಗೊಳಿಸಿ ಕಳಿಸಿದರೆ ನಾಳೆಯೇ ನೇಮಕ ಮಾಡುತ್ತೇವೆ ಎಂದು ಹೇಳಿದರು.</p>.<p><strong>ಪತ್ರಕರ್ತರಿಗೆ ನಿವೇಶನದಲ್ಲಿ ಶೇ 5 ಮೀಸಲು:</strong> ಪತ್ರಕರ್ತರಿಗೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಭಿವೃದ್ಧಿಪಡಿಸುವ ನಿವೇಶನಗಳ ಪೈಕಿ ಶೇ 5ರಷ್ಟನ್ನು ಪತ್ರಕರ್ತರಿಗೆ ಮೀಸಲಿಡಲು ತೀರ್ಮಾನಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೂ ಸಮ್ಮತಿಸಿದ್ದಾರೆ ಎಂದರು.</p>.<p>ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ಶುದ್ಧೀಕರಿಸಿದ ಚರಂಡಿ ನೀರನ್ನು ನಗರದಲ್ಲಿರುವ ಉದ್ಯಾನಗಳು ಹಾಗೂ ಕೆರೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ತಿಳಿಸಿದರು.</p>.<p>ನಗರದ ಸ್ವಚ್ಛತೆ, ಕುಡಿಯುವ ನೀರು ಪೂರೈಕೆ, ಕೊಳಚೆ ನೀರು ಸಂಸ್ಕರಣ ಘಟಕಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಶುದ್ಧೀಕರಿಸಿದ ನೀರನ್ನು ಮರಳಿ ಭೀಮಾ ನದಿಗೆ ಬಿಡುವ ಬಿಡಲಾಗುತ್ತಿತ್ತು. ಅದಕ್ಕೆ ನಾಗರಿಕರೂ ಬೇಸರ ವ್ಯಕ್ತಪಡಿಸಿದ್ದರು. ಹೀಗಾಗಿ, ಉದ್ಯಾನಗಳ ನಿರ್ವಹಣೆಗೆ ಬಳಸಲಾಗುವುದು ಎಂದರು.</p>.<p><strong>₹ 150 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ:</strong> ನಗರದಲ್ಲಿ ಹದಗೆಟ್ಟಿರುವ ಆಳಂದ ರಿಂಗ್ ರಸ್ತೆ, ತಾಜ ಸುಲ್ತಾನಪುರ ರಸ್ತೆ ಸೇರಿದಂತೆ ದುಃಸ್ಥಿತಿಯಲ್ಲಿ ರಸ್ತೆಗಳ ಅಭಿವೃದ್ಧಿಗೆ ₹ 150 ಕೋಟಿ ವೆಚ್ಚದ ಯೋಜನೆ ಸಿದ್ಧಪಡಿಸಲಾಗಿದೆ ಎಂದರು.</p>.<p><strong>ಸ್ಮಾರ್ಟ್ ಸಿಟಿ ಘೋಷಣೆ ಶೀಘ್ರ</strong>: ಕಲಬುರ್ಗಿ ಸೇರಿದಂತೆ ಇನ್ನೂ ನಾಲ್ಕು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ. ಕೋವಿಡ್ ನಿಂದಾಗಿ ದೆಹಲಿ ಪ್ರವಾಸ ಕೈಗೊಳ್ಳಲು ಸಾಧ್ಯವಾಗಿಲ್ಲ ಎಂದರು.</p>.<p>ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ನೇಮಕ ಮಾಡುವ ಬಗ್ಗೆ ಪ್ರಸ್ತಾವ ಬಂದಿಲ್ಲ. ಶಾಸಕರು ಹೆಸರನ್ನು ಅಂತಿಮಗೊಳಿಸಿ ಕಳಿಸಿದರೆ ನಾಳೆಯೇ ನೇಮಕ ಮಾಡುತ್ತೇವೆ ಎಂದು ಹೇಳಿದರು.</p>.<p><strong>ಪತ್ರಕರ್ತರಿಗೆ ನಿವೇಶನದಲ್ಲಿ ಶೇ 5 ಮೀಸಲು:</strong> ಪತ್ರಕರ್ತರಿಗೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಭಿವೃದ್ಧಿಪಡಿಸುವ ನಿವೇಶನಗಳ ಪೈಕಿ ಶೇ 5ರಷ್ಟನ್ನು ಪತ್ರಕರ್ತರಿಗೆ ಮೀಸಲಿಡಲು ತೀರ್ಮಾನಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೂ ಸಮ್ಮತಿಸಿದ್ದಾರೆ ಎಂದರು.</p>.<p>ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>