ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಡಬ್ಲ್ಯೂಡಿ ಹಗರಣ: ಸಮಗ್ರ ತನಿಖೆಗೆ ಆಗ್ರಹ

Last Updated 1 ಮೇ 2019, 17:37 IST
ಅಕ್ಷರ ಗಾತ್ರ

ಬೆಂಗಳೂರು: ‘ಲೋಕೋಪಯೋಗಿ ಇಲಾಖೆಯಲ್ಲಿ ಕಾಮಗಾರಿ ನಡೆಸುವ ಮುನ್ನವೇ ಗುತ್ತಿಗೆದಾರರಿಗೆ ₹1,344 ಕೋಟಿ ಪಾವತಿಸಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಒತ್ತಾಯಿಸಿದರು.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಲಾಖೆಯಲ್ಲಿ ತುಂಡು ಗುತ್ತಿಗೆಯ ಜತೆಗೆ ಕಳ್ಳ ಬಿಲ್‌, ಸುಳ್ಳು ಲೆಕ್ಕವನ್ನೂ ಬರೆಯಲಾಗಿದೆ. ಇದು ಇಂದು ನಿನ್ನೆಯದ್ದಲ್ಲ, ಪಿತ್ರಾರ್ಜಿತವಾಗಿ ಬಂದಿದೆ. ಸಮಗ್ರ ತನಿಖೆಯಾದರೆ ಯಾರು ಕಂಬಿ ಎಣಿಸಬೇಕು ಎಂಬುದು ನಿರ್ಧಾರವಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT