ಬೆಂಗಳೂರು: ‘ಲೋಕೋಪಯೋಗಿ ಇಲಾಖೆಯಲ್ಲಿ ಕಾಮಗಾರಿ ನಡೆಸುವ ಮುನ್ನವೇ ಗುತ್ತಿಗೆದಾರರಿಗೆ ₹1,344 ಕೋಟಿ ಪಾವತಿಸಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಒತ್ತಾಯಿಸಿದರು.
ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಲಾಖೆಯಲ್ಲಿ ತುಂಡು ಗುತ್ತಿಗೆಯ ಜತೆಗೆ ಕಳ್ಳ ಬಿಲ್, ಸುಳ್ಳು ಲೆಕ್ಕವನ್ನೂ ಬರೆಯಲಾಗಿದೆ. ಇದು ಇಂದು ನಿನ್ನೆಯದ್ದಲ್ಲ, ಪಿತ್ರಾರ್ಜಿತವಾಗಿ ಬಂದಿದೆ. ಸಮಗ್ರ ತನಿಖೆಯಾದರೆ ಯಾರು ಕಂಬಿ ಎಣಿಸಬೇಕು ಎಂಬುದು ನಿರ್ಧಾರವಾಗುತ್ತದೆ’ ಎಂದರು.