‘ಕೊರೊನಾ ಕಾರಣದಿಂದ ವಿದೇಶದಲ್ಲಿರುವ ಕನ್ನಡಿಗರಿಗೆ ಸರ್ಕಾರ ಸ್ಪಂದಿಸಿದೆ. ಅವರನ್ನು ತಾಯ್ನಾಡಿಗೆ ಕರೆಕೊಂಡು ಬರಲು ವಿಮಾನಯಾನ ಸೇವೆ ಕಲ್ಪಿಸಿದೆ. ದೋಹಾದಿಂದ ಬೆಂಗಳೂರಿಗೆ ಪ್ರತ್ಯೇಕ ವಿಮಾನ ನಿಗದಿಪಡಿಸಿದೆ. ಆದರೆ ಕತಾರ್ನಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಬಹುತೇಕ ಕನ್ನಡಿಗರು ಕೆಲಸ ಕಳೆದುಕೊಂಡು, ಜೀವನ ನಡೆಸಲು ಪರದಾಡುತ್ತಿದ್ದಾರೆ’ ಎಂದು ಸಮಿತಿಯ ಪ್ರತಿನಿಧಿ ಸುಬ್ರಮಣ್ಯ ಹೆಬ್ಬಾಗಿಲು ಮನವಿಯಲ್ಲಿ ತಿಳಿಸಿದ್ದಾರೆ.