‘ಅಂತರ ಜಿಲ್ಲೆಗಳಿಂದ ವಿಮಾನಗಳಲ್ಲಿ ಬಂದವರನ್ನು ಕ್ವಾರಂಟೈನ್ ಮಾಡುವುದಿಲ್ಲ. ಅಂತರ ರಾಜ್ಯಗಳಿಂದ ಬಂದವರನ್ನು ಕ್ವಾರಂಟೈನ್ ಮಾಡುವಂತೆ ಮಾರ್ಗಸೂಚಿ ಇದೆ. ದೆಹಲಿ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ ಹಾಗೂ ತಮಿಳುನಾಡು ರಾಜ್ಯಗಳಿಂದ ಬರುವವರನ್ನು ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುವುದು. ಅದರಂತೆ ಅಹಮದಾಬಾದ್ನಿಂದ ಬಂದ 19 ಮಂದಿಗೆ ಕ್ವಾರಂಟೈನ್ ಸೀಲ್ ಹಾಕಲಾಗಿದೆ. ಬೆಳಗಾವಿಗೆ ಸಂಬಂಧಿಸಿದ 8 ಮಂದಿಯನ್ನು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಉಳಿದವರಿಗೆ ಸೀಲ್ ಹಾಕಿ ಆಯಾ ಜಿಲ್ಲೆಗಳಲ್ಲಿನ ಸಂಬಂಧಿಸಿದ ನೋಡಲ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಅಲ್ಲಿ ಕ್ವಾರಂಟೈನ್ ಮಾಡಿದ ಬಗ್ಗೆ ಮಾಹಿತಿ ಪಡೆಯಲಾಗುವುದು. ದೇಶದ ಇತರ ನಗರಗಳಿಂದ ಬರುವವರಿಗೆ ಹೋಂ ಕ್ವಾರಂಟೈನ್ಗೆ ಸೂಚಿಸಲಾಗುವುದು’ ಎಂದು ನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.