‘ಯಶವಂತಪುರ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿಯಾಗಿದ್ದಾಗ ನಾನು ಹೆಚ್ಚಿನ ಅನುದಾನ ನೀಡಿದ್ದೆ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್, ‘ಅವರು ಮುಖ್ಯಮಂತ್ರಿ ಆಗಲು ಬೆಂಬಲ ನೀಡಿದ ಶಾಸಕರಲ್ಲಿ ನಾನೂ ಒಬ್ಬ. ಪ್ರತಿ ಕ್ಷೇತ್ರಗಳಿಗೆ ಅನುದಾನ ನೀಡಬೇಕಾದುದು ಮುಖ್ಯಮಂತ್ರಿ ಕರ್ತವ್ಯ. ಅಭಿವೃದ್ಧಿ ಮಾಡಬೇಕಾಗಿದ್ದು ಶಾಸಕರ ಕರ್ತವ್ಯ’ ಎಂದರು.