ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವೇಗೌಡ– ಸಿದ್ದರಾಮಯ್ಯ ಒಂದಾಗಲು ಸಾಧ್ಯವಿಲ್ಲ: ಆರ್.ಅಶೋಕ್

Last Updated 22 ಅಕ್ಟೋಬರ್ 2018, 17:49 IST
ಅಕ್ಷರ ಗಾತ್ರ

ಕೆ.ಆರ್.ನಗರ: ಪ್ರಕೃತಿಯಲ್ಲಿ ಹಾವು– ಮುಂಗುಸಿ ಒಂದಾದ ಉದಾಹರಣೆ ಇಲ್ಲ. ಅದೇ ರೀತಿ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಎಂದೂ ಒಂದಾಗುವುದಿಲ್ಲ ಎಂದು ಬಿಜೆಪಿ ನಾಯಕ ಆರ್.ಅಶೋಕ್ ಸೋಮವಾರ ಇಲ್ಲಿ ಹೇಳಿದರು.

ಮಂಡ್ಯ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

‘ಎಚ್.ಡಿ.ದೇವೇಗೌಡ ಮತ್ತು ಸಿದ್ದರಾಮಯ್ಯ ಹಾವು– ಮುಂಗುಸಿಯಂತೆ. ಆದರೆ, ಇಬ್ಬರೂ ಈಗ ಒಂದಾಗಿದ್ದೇವೆ ಎನ್ನುತ್ತಿದ್ದಾರೆ. ಇವರನ್ನು ಯಾವಾಗ ಮುಗಿಸಬೇಕೆಂದು ಅವರು, ಅವರನ್ನು ಯಾವಾಗ ಮುಗಿಸಬೇಕೆಂದು ಇವರು ಕಾಯುತ್ತಿದ್ದಾರೆ. ಇದು ಜನರಿಗೂ ಗೊತ್ತಿದೆ. ಅಲ್ಲದೆ, ಇಬ್ಬರೂ ಸೇರಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಪಕ್ಕದಲ್ಲೇ ಕುಳಿತಿದ್ದರೂ ಇಬ್ಬರ ಮುಖಗಳು ವಿರುದ್ಧ ದಿಕ್ಕಿನಲ್ಲಿ ಇದ್ದವು’ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT