ಬಿಜೆಪಿ ಉಸ್ತುವಾರಿ ಮುರುಳೀಧರರಾವ್ ಹಾಗೂ ಪಕ್ಷದ ಅಭ್ಯರ್ಥಿ ತೇಜಸ್ವಿ ಸೂರ್ಯ ಬಂದು ಭೇಟಿಯಾಗಿದ್ದರು. ಪಕ್ಷ ಮೊದಲು, ವ್ಯಕ್ತಿ ನಂತರ. ನರೇಂದ್ರ ಮೋದಿಯವರೇ ನಮಗೆ ಎಲ್ಲ ಕ್ಷೇತ್ರಗಳಲ್ಲೂ ಅಭ್ಯರ್ಥಿ. ಮೋದಿಯವರನ್ನು ಮತ್ತೆ ಪ್ರಧಾನಿಯಾಗಿ ಮಾಡಬೇಕು. ಹಾಗಾಗಿ ಬೆಂಗಳೂರು ದಕ್ಷಿಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಪ್ರಚಾರ ಮಾಡುತ್ತೇವೆ. ತೇಜಸ್ವಿನಿ ಅನಂತಕುಮಾರ್ ಅವರಿಗೆ ಅನ್ಯಾಯವಾಗಿದೆ. ಆದರೂ ಪಕ್ಷ ಮೊದಲು ಹಾಗಾಗಿ ಅವರನ್ನೂ ಸಮಾಧಾನ ಪಡಿಸುವ ಪ್ರಯತ್ನ ಮಾಡುತ್ತೇವೆ ಎಂದರು.