ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾಜವಾದಿ ಹೋರಾಟಗಾರ ರಾಚಪ್ಪ ಹಡಪದ ನಿಧನ

Last Updated 4 ಫೆಬ್ರುವರಿ 2020, 15:19 IST
ಅಕ್ಷರ ಗಾತ್ರ

ಧಾರವಾಡ: ಸಮಾಜವಾದಿ ಹೋರಾಟಗಾರ ರಾಚಪ್ಪ ಹಡಪದ (84) ಅವರು ಮಂಗಳವಾರ ಇಲ್ಲಿ ನಿಧನರಾದರು.

ಕ್ಷೌರಿಕ ವೃತ್ತಿಯೊಂದಿಗೆ ರಾಚಪ್ಪ ಅವರು ಲೋಹಿಯಾ, ಶಾಂತವೇರಿ ಗೋಪಾಲಗೌಡ ಅವರ ಸಂಪರ್ಕ ಪಡೆದು ಸಮಾಜವಾದಿ ಹೋರಾಟಕ್ಕೆ ಧುಮುಕಿದರು. ತಾಲ್ಲೂಕಿನ ಹೆಬ್ಬಳ್ಳಿಯಲ್ಲಿ ನಡೆದ ಕರ್ನಾಟಕದ 2ನೇ ಭೂ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರ ಸಮಾಜವಾದ ಹೋರಾಟವನ್ನು ಪರಿಗಣಿಸಿ ರಾಜ್ಯ ಸರ್ಕಾರವು 2018ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.

ಬೈಲಹೊಂಗಲ ತಾಲ್ಲೂಕಿನ ಹೊಳೆಹೊಸೂರಿನವರಾದ ರಾಚಪ್ಪ ನವಲಗುಂದದಲ್ಲಿ ವೃತ್ತಿ ಜೀವನ ಆರಂಭಿಸಿದರು. ಇಲ್ಲಿನ ರಾಜೀವಗಾಂಧಿ ನಗರದಲ್ಲಿ ಒಬ್ಬಂಟಿಯಾಗಿಯೇ ನೆಲೆಸಿದ್ದರು. ಮೃತರ ಅಂತ್ಯಕ್ರಿಯೆಯನ್ನು ಅವರ ಅಭಿಮಾನಿಗಳು ಮಂಗಳವಾರ ಇಲ್ಲಿ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT