ಸಂತ್ರಸ್ತೆಯ ಕುಟುಂಬಕ್ಕೆ ಮತ್ತು ವಕೀಲೆ ದೀಪಿಕಾ ಸಿಂಗ್ ರಜಾವತ್ ಅವರಿಗೆ ಭದ್ರತೆ ಒದಗಿಸಬೇಕೆಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಈಚೆಗೆ ಪೊಲೀಸರಿಗೆ ಆದೇಶಿಸಿತ್ತು. ರಾಜ್ಯ ಸರ್ಕಾರ ಅಭಿಪ್ರಾಯ ಮಂಡಿಸಿದ ಬಳಿಕ ವಿಚಾರಣೆಯನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.