<p><strong>ಬೆಂಗಳೂರು:</strong> ಭಾರತದ ಪ್ರಾಚೀನ ಶಿಕ್ಷಣ ಮತ್ತು ಸಂಸ್ಕೃತಿಯ ಪುನರುತ್ಥಾನಕ್ಕಾಗಿ ಗೋಕರ್ಣದ ಅಶೋಕೆಯಲ್ಲಿ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸ್ಥಾಪನೆಯ ಉದ್ದೇಶದಿಂದ ರಾಮಾಯಣ ಅನುಸಂಧಾನದ ಕಾರ್ಯ ಆಗುತ್ತಿದೆ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.</p>.<p>ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂಕಲ್ಪ ಸಿದ್ಧಿಗಾಗಿ ಆರು ತಿಂಗಳ ಧಾರಾ ರಾಮಾಯಣ ಪ್ರವಚನವನ್ನು ಗಿರಿನಗರದ ರಾಮಾಶ್ರಮದಲ್ಲಿ ಗುರುವಾರ ಆರಂಭಿಸಲಾಯಿತು.</p>.<p>‘ಧಾರಾ ರಾಮಾಯಣದ ಮೂಲಕ ಇಡೀ ಸಮಾಜದಲ್ಲಿ ಧರ್ಮಜಾಗೃತಿ ಹಾಗೂ ದೇಶದ ಸಂಸ್ಕೃತಿಯ ಪುನರುತ್ಥಾನಕ್ಕೆ ನಾಂದಿ ಹಾಡುವ ವಿಶ್ವವಿದ್ಯಾಪೀಠವೊಂದರ ಸ್ಥಾಪನೆಯ ಅಗತ್ಯ- ಅನಿವಾರ್ಯತೆ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವ ಸಂಕಲ್ಪ ನಮ್ಮದು’ ಎಂದು ಹೇಳಿದರು.</p>.<p>‘ನಮ್ಮೊಳಗೇ ರಾಮನಿದ್ದಾನೆ; ನಮ್ಮ ಆತ್ಮವೇ ರಾಮ; ಚಿತ್ತಶುದ್ಧಿಯೊಂದಿಗೆ ಆತನನ್ನು ಉದ್ದೀಪಿಸುವುದೇ ರಾಮಾಯಣ ಅನುಸಂಧಾನದ ಉದ್ದೇಶ’ ಎಂದರು.</p>.<p>ಮಠದ ಪ್ರಮುಖರಾದ ರಾಮಕೃಷ್ಣ ಭಟ್ ಕೂಟೇಲು, ತಿಮ್ಮಪ್ಪ ಮಡಿಯಾಳ್, ಕೆ.ಜಿ.ಭಟ್, ಧಾರಾ ರಾಮಾಯಣ ಕ್ರಿಯಾಸಮಿತಿ ಅಧ್ಯಕ್ಷೆ ಡಾ.ಶಾರದಾ ಜಯಗೋವಿಂದ್, ಕಾರ್ಯದರ್ಶಿ ವಿದ್ವಾನ್ ಜಗದೀಶ ಶರ್ಮ ಸಂಪ ಇದ್ದರು. ‘ಬಾಳದಾರಿಗೆ ರಾಮದೀವಿಗೆ’ ಎಂಬ ಹೆಸರಿನ ಈ ಪ್ರವಚನಪ್ರತಿದಿನ ಸಂಜೆ 6.45ರಿಂದ 8.15ರವರೆಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಭಾರತದ ಪ್ರಾಚೀನ ಶಿಕ್ಷಣ ಮತ್ತು ಸಂಸ್ಕೃತಿಯ ಪುನರುತ್ಥಾನಕ್ಕಾಗಿ ಗೋಕರ್ಣದ ಅಶೋಕೆಯಲ್ಲಿ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸ್ಥಾಪನೆಯ ಉದ್ದೇಶದಿಂದ ರಾಮಾಯಣ ಅನುಸಂಧಾನದ ಕಾರ್ಯ ಆಗುತ್ತಿದೆ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.</p>.<p>ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂಕಲ್ಪ ಸಿದ್ಧಿಗಾಗಿ ಆರು ತಿಂಗಳ ಧಾರಾ ರಾಮಾಯಣ ಪ್ರವಚನವನ್ನು ಗಿರಿನಗರದ ರಾಮಾಶ್ರಮದಲ್ಲಿ ಗುರುವಾರ ಆರಂಭಿಸಲಾಯಿತು.</p>.<p>‘ಧಾರಾ ರಾಮಾಯಣದ ಮೂಲಕ ಇಡೀ ಸಮಾಜದಲ್ಲಿ ಧರ್ಮಜಾಗೃತಿ ಹಾಗೂ ದೇಶದ ಸಂಸ್ಕೃತಿಯ ಪುನರುತ್ಥಾನಕ್ಕೆ ನಾಂದಿ ಹಾಡುವ ವಿಶ್ವವಿದ್ಯಾಪೀಠವೊಂದರ ಸ್ಥಾಪನೆಯ ಅಗತ್ಯ- ಅನಿವಾರ್ಯತೆ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವ ಸಂಕಲ್ಪ ನಮ್ಮದು’ ಎಂದು ಹೇಳಿದರು.</p>.<p>‘ನಮ್ಮೊಳಗೇ ರಾಮನಿದ್ದಾನೆ; ನಮ್ಮ ಆತ್ಮವೇ ರಾಮ; ಚಿತ್ತಶುದ್ಧಿಯೊಂದಿಗೆ ಆತನನ್ನು ಉದ್ದೀಪಿಸುವುದೇ ರಾಮಾಯಣ ಅನುಸಂಧಾನದ ಉದ್ದೇಶ’ ಎಂದರು.</p>.<p>ಮಠದ ಪ್ರಮುಖರಾದ ರಾಮಕೃಷ್ಣ ಭಟ್ ಕೂಟೇಲು, ತಿಮ್ಮಪ್ಪ ಮಡಿಯಾಳ್, ಕೆ.ಜಿ.ಭಟ್, ಧಾರಾ ರಾಮಾಯಣ ಕ್ರಿಯಾಸಮಿತಿ ಅಧ್ಯಕ್ಷೆ ಡಾ.ಶಾರದಾ ಜಯಗೋವಿಂದ್, ಕಾರ್ಯದರ್ಶಿ ವಿದ್ವಾನ್ ಜಗದೀಶ ಶರ್ಮ ಸಂಪ ಇದ್ದರು. ‘ಬಾಳದಾರಿಗೆ ರಾಮದೀವಿಗೆ’ ಎಂಬ ಹೆಸರಿನ ಈ ಪ್ರವಚನಪ್ರತಿದಿನ ಸಂಜೆ 6.45ರಿಂದ 8.15ರವರೆಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>