ಈಗಾಗಲೇ ಜಾರಿಯಾಗಿರುವ ಲಿಂಗನಮಕ್ಕಿ, ಕಾರ್ಗಲ್, ಚಕ್ರಾ, ಸಾವೇಹಕ್ಕಲು, ವಾರಾಹಿ, ರೇಗುಸೊಪ್ಪೆ, ಗಾಜನೂರು, ಭದ್ರಾ, ಮಾಣಿ, ನಾಗಝರಿ, ಕಾಳಿ ಯೋಜನೆಗಳಿಂದ ಜನರು ಅಪಾರ ಕಷ್ಟ ನಷ್ಟ ಅನುಭವಿಸಿದ್ದಾರೆ. ತನ್ನ ಧಾರಣಾ ಸಾಮಥ್ರ್ಯ ಮೀರಿದ ಯೋಜನೆಗಳಿಗೆ ಸಿಕ್ಕು ಪಶ್ಚಿಮಘಟ್ಟ ನಲುಗುತ್ತಿದೆ. ಮತ್ತೊಂದು ಅಂಥ ದುಬಾರಿ ಯೋಜನೆಯ ದುಸ್ಸಾಹಸ ಮಾಡುವ ಬದಲು, ಮಳೆ ನೀರು ಕೊಯ್ಲಿನಂಥ ಸುಸ್ಥಿರ ವಿಧಾನದ ಮೂಲಕ ನೀರಿನ ಸಮಸ್ಯೆ ಬಗೆಹರಿಸುವತ್ತ ನಮ್ಮ ಆಡಳಿತಗಾರರು ಗಮನ ಹರಿಸಲು ಎಂದು ಹೇಳಿದ್ದಾರೆ.