ಗೌರಿಬಿದನೂರು: ತಾಲ್ಲೂಕಿನಾದ್ಯಂತ ವಿಧಾನಸಭಾ ಚುನಾವಣೆಯಲ್ಲಿ ಬಿರುಸಿ ನಿಂದ ಮತದಾನ ನಡೆಯಿತು. ಬೆಳಿಗ್ಗೆಯಿಂದಲೇ ಮತದಾನಕ್ಕಾಗಿ ಜನರು ಸರತಿ ಸಾಲಿನಲ್ಲಿ ನಿಂತಿದ್ದರು.
ಬೆಳಿಗ್ಗೆ ಮತದಾನ ಪ್ರಮಾಣ ಸ್ವಲ್ಪ ಕಡಿಮೆಯಾಗಿದ್ದರೂ, ಬಿಸಿಲೇರುತ್ತಿದ್ದಂತೆ ಏರಿಕೆಯಾಯಿತು. ಮತದಾರರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎನ್.ಎಚ್.ಶಿವಶಂಕರರೆಡ್ಡಿ ತಮ್ಮ ಸ್ವಗ್ರಾಮ ನಾಗಸಂದ್ರದಲ್ಲಿ ಮತ ಹಾಕಿದರು.
ಜೆಡಿಎಸ್ ಅಭ್ಯರ್ಥಿ ಸಿ.ಆರ್. ನರಸಿಂಹಮೂರ್ತಿ ಚಂದನದೂರು ಮತಗಟ್ಟೆಯಲ್ಲಿ ಪತ್ನಿ ಜೊತೆ ಹೋಗಿ ಮತ ಚಲಾಯಿಸಿದರು. ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಸಿ. ಮಂಜುನಾಥರೆಡ್ಡಿ ಚೀಗಟಗೆರೆಯಲ್ಲಿ ಮತದಾರರೊಂದಿಗೆ ಸಾಲಿನಲ್ಲಿ ನಿಂತು ಮತ ಹಾಕಿದರು.
ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಡಾ. ರೋಷನ್ ಅಬ್ಬಾಸ್ ಅಲೀಪುರದಲ್ಲಿ ಮತದಾನ ಮಾಡಿದರು.