ಲೋಕಾಯುಕ್ತ ದಾಖಲಿಸಿದ್ದ ಎಫ್ಐಆರ್ ಹಾಗೂ ದೋಷಾರೋಪ ಪಟ್ಟಿಯನ್ನು ಆಧರಿಸಿ ಇ.ಡಿ, ರಘು ಅವರ ವಿರುದ್ಧ ತನಿಖೆ ಕೈಗೊಂಡಿದೆ. ರಘು, ಸಿದ್ದರಾಮಯ್ಯ ಅವರಿಗೆ ದುಬಾರಿ ಹ್ಯೂಬ್ಲೊ ಕೈಗಡಿಯಾರವನ್ನು ಉಡುಗೊರೆಯಾಗಿ ನೀಡಿದ್ದ ಆರೋಪಕ್ಕೂ ಒಳಗಾಗಿದ್ದರು. ಈ ಪ್ರಕರಣದ ತನಿಖೆಗೆ ಸಮನ್ವಯ ಸಮಿತಿ ಅಧ್ಯಕ್ಷರ ಪ್ರಾಸಿಕ್ಯೂಷನ್ಗೂ ಅನುಮತಿ ನೀಡುವಂತೆ ಕೇಳಲಾಗಿತ್ತು. ಆದರೆ, ಅನುಮತಿ ದೊರೆತಿರಲಿಲ್ಲ.