ಆದರೆ ದೇಶದಲ್ಲಿ ಕೊರೊನಾ ಅಟ್ಟಹಾಸ ಹಾಗೂ ಲಡಾಖ್ ಗಡಿಯಲ್ಲಿ ದೇಶದ 20 ಯೋಧರು ಹುತಾತ್ಮರಾದ ಹಿನ್ನೆಲೆ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ರಾಹುಲ್ ನಿರ್ಧರಿಸಿದ್ದಾರೆ. ಈ ಕುರಿತು ಎಲ್ಲಾ ರಾಜ್ಯ ಘಟಕಗಳಿಗೆ ಮಾಹಿತಿ ನೀಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಕೋರಿ, ಬಡವರಿಗೆ ಆಹಾರ ಕಿಟ್ಗಳನ್ನು ವಿತರಿಸಿ. ಆದರೆ, ಸಂಭ್ರಮಾಚರಣೆ ಬೇಡ ಎಂದು ಸೂಚನೆ ನೀಡಿದ್ದಾರೆ.