ಬುಧವಾರ ಇಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸುಳ್ಳು ಭರವಸೆಗಳೇ ತುಂಬಿವೆ. ಬಡವರು ಕಾಂಗ್ರೆಸ್ಗೆ ವೋಟ್ ಬ್ಯಾಂಕ್ ಸರಕು. ರಾಜ್ಯದಲ್ಲಿ ಅವರದ್ದೇ ಸರ್ಕಾರವಿದ್ದು, ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ನೀಡುವ ₹5 ಸಾವಿರ ಹಣಕ್ಕೆ ಒಂದೂವರೆ ವರ್ಷ ಕಾಯಬೇಕಾದ ಸ್ಥಿತಿ ಇದೆ. ಚುನಾವಣೆ ಸಮಯದಲ್ಲಷ್ಟೇ ಬಡವರ ಬಗ್ಗೆ ಹುಸಿ ಕಾಳಜಿ ವ್ಯಕ್ತಪಡಿಸುತ್ತಾರೆ’ ಎಂದರು.