ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಕ್ಕೆ 19ರಂದು ಮತ್ತೆ ರಾಹುಲ್

Last Updated 15 ಏಪ್ರಿಲ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಗಿದ ಮರುದಿನ (ಏ. 19) ಉತ್ತರ ಕರ್ನಾಟಕ ಭಾಗದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

ಅಂದು ಬೆಳಿಗ್ಗೆ 11 ಗಂಟೆಗೆ ಚಿಕ್ಕೋಡಿ, ಸಂಜೆ 4 ಗಂಟೆಗೆ ರಾಯಚೂರಿನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಸಮಾವೇಶಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

ಏಪ್ರಿಲ್ 18ರಂದು ರಾಹುಲ್‌ ರಾಜ್ಯ ಪ್ರವಾಸ ನಿಗದಿಯಾಗಿತ್ತು. ಆದರೆ, ಅದೇ ದಿನ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯ ನಾಯಕರ ಅನುಪಸ್ಥಿತಿಯಲ್ಲಿ ಪ್ರಚಾರ ಸಭೆ ನಡೆಸುವುದು ಬೇಡ ಎಂಬ ಕಾರಣಕ್ಕೆ ತಮ್ಮ ಪ್ರವಾಸವನ್ನು ರಾಹುಲ್ ಒಂದು ದಿನ ಮುಂದೂಡಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT