ವಿದ್ಯುತ್ ಸ್ಥಗಿತ: ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಸುತ್ತಮುತ್ತ ಹಾಗೂ ರಾಯಚೂರಿನ ಎಲ್ಬಿಎಸ್ ನಗರದಲ್ಲಿ ಬಿರುಗಾಳಿಯಿಂದಾಗಿ ವಿದ್ಯುತ್ ಕಂಬಗಳು ಉರುಳು ಬಿದ್ದು, ಮುಖ್ಯ ವಿದ್ಯುತ್ ಸ್ಟೇಷನ್ಗಳಲ್ಲಿ ಹಾನಿ ಉಂಟಾಗಿದೆ. ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಆದರೂ ಶನಿವಾರ ತಡೆರಾತ್ರಿವರೆಗೂ ವಿದ್ಯುತ್ ಸಂಪರ್ಕ ಇರಲಿಲ್ಲ. ಶುಕ್ರವಾರ ರಾತ್ರಿಯಿಂದಲೂ ವಿದ್ಯುತ್ ಸಂಪರ್ಕ ಕಡಿತವಾಗಿದ್ದರಿಂದ ಬೇಸಿಗೆ ಬಿಸಿಲಿನಿಂದ ಜನರು ಪರದಾಡುವ ಪರಿಸ್ಥಿತಿ ಉದ್ಭವವಾಗಿದೆ.