ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಲಾಭದಲ್ಲಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕಾಂಗ್ರೆಸ್ ಅವಧಿಯಲ್ಲಿ ನಷ್ಟ ಅನುಭವಿಸಿರುವ ಕುರಿತು ಆರ್ಟಿಐ ಮಾಹಿತಿ ಪ್ರತಿಯನ್ನು ಲೇಖಕ ಚಕ್ರವರ್ತಿ ಸೂಲಿಬೆಲೆ ಟ್ವೀಟಿಸಿದ್ದಾರೆ.
ಬಿಜೆಪಿಯ ಆರ್.ಅಶೋಕ್ ಸಾರಿಗೆ ಸಚಿವರಾಗಿದ್ದ ಅವಧಿ(2008–2013)ಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಲಾಭವನ್ನಷ್ಟೇ ಕಂಡಿದ್ದು, ನಷ್ಟ ಅನುಭವಿಸಿಲ್ಲ. ಕಾಂಗ್ರೆಸ್ನ ರಾಮಲಿಂಗಾ ರೆಡ್ಡಿ ಅವರು ಸಾರಿಗೆ ಸಚಿವರಾಗಿದ್ದ ಅವಧಿ(2013–2017)ಯಲ್ಲಿ ನಷ್ಟದ ಪ್ರಮಾಣ ₹177 ಕೋಟಿಯಷ್ಟಿರುವುದು ಆರ್ಟಿಐ ಮಾಹಿತಿ ಪ್ರತಿಯಲ್ಲಿ ಕಾಣಬಹುದು. ಇದನ್ನು ಚಕ್ರವರ್ತಿ ಸೂಲಿಬೆಲೆ ಟ್ವಿಟರ್ನಲ್ಲಿ ಪ್ರಕಟಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.