ಬೆಂಗಳೂರು:ಬಂಗಾಳ ಕೊಲ್ಲಿಯಿಂದ ಬೀಸಿ ಬರುತ್ತಿರುವ ಗಾಜಾ ಚಂಡಮಾರುತದಿಂದಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಶುಕ್ರವಾರ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ.
ಈ ಮಾರುತದಿಂದ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಆಗುವುದಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.