ಸಮೀಪದ ಭಾಗಮಂಡಲ ತಲಕಾವೇರಿ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗಿದೆ. ಬೆಟ್ಟಶ್ರೇಣಿಗಳಲ್ಲಿ ಮಳೆ ಸುರಿದ ಪರಿಣಾಮ ನದಿ, ತೋಡುಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕಾವೇರಿ ನದಿ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡುಬಂತು. ಅಲ್ಲಲ್ಲಿ ಮಳೆಯಾದ ಪರಿಣಾಮ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಮಧ್ಯಾಹ್ನದ ನಂತರ ಮಳೆ ಇಳಿಮುಖಗೊಂಡಿತು.