<p><strong>ಬೆಂಗಳೂರು:</strong> ರಾಜ್ಯದ ಮಲೆನಾಡು ಸೇರಿದಂತೆ ಎಲ್ಲೆಡೆ ಮುಂಗಾರು ಮಳೆ ಕ್ಷೀಣಿಸಿದೆ. ಆದರೆ, ನೆರೆಯ ಮಹಾ<br />ರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಕೃಷ್ಣಾ ಹಾಗೂ ಅದರ ಉಪನದಿಗಳ ಒಳಹರಿವು ಹೆಚ್ಚಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ರಸ್ತೆ ಮಟ್ಟದ ಮೂರು ಸೇತುವೆಗಳ ಮೇಲೆ ನೀರು ಹರಿಯುತ್ತಿದೆ.</p>.<p>ಕೃಷ್ಣಾ ಮತ್ತು ಅದರ ಉಪನದಿಗಳಾದ ದೂಧ್ಗಂಗಾ, ವೇದಗಂಗಾ ಮತ್ತು ಪಂಚಗಂಗಾ ನದಿಗಳ ಒಳಹರಿವು ಹೆಚ್ಚಾಗಿದೆ. ಚಿಕ್ಕೋಡಿ ತಾಲ್ಲೂಕಿನ ಮಲಿಕವಾಡ ಹಾಗೂ ಮಹಾರಾಷ್ಟ್ರದ ದತ್ತವಾಡ ಗ್ರಾಮಗಳ ಮಧ್ಯೆ ಇರುವ ಸೇತುವೆ, ನಿಪ್ಪಾಣಿ ತಾಲ್ಲೂಕಿನ ಭೋಜವಾಡಿ-ಕುನ್ನೂರ ಗ್ರಾಮಗಳ ನಡುವಿನ ಸೇತುವೆ ಹಾಗೂ ಕಾರದಗಾ–ಭೋಜ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳ ಮೇಲೆ ನೀರು ಹರಿಯುತ್ತಿದೆ. ಈ ಸೇತುವೆಗಳಿಗೆ ಪರ್ಯಾಯ ಮಾರ್ಗಗಳಿದ್ದು, ಜನರ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ.</p>.<p>ರಾಜಾಪುರ ಬ್ಯಾರೇಜ್ನಿಂದ 23 ಸಾವಿರ ಕ್ಯುಸೆಕ್ ನೀರು ಕೃಷ್ಣಾ ನದಿಗೆ ಸೇರುತ್ತಿದೆ. ರಾಜಾಪುರ ಬ್ಯಾರೇಜ್ನ ಎಲ್ಲ 36 ಗೇಟ್ಗಳನ್ನು ತೆರೆಯಲಾಗಿದೆ.</p>.<p class="Subhead"><strong>ಮಳೆ ಕ್ಷೀಣ:</strong> ಎರಡು ದಿನಗಳಿಂದ ಸತತ ಸುರಿದ ಮಳೆ ಸೋಮವಾರ ಬಿಡುವು ನೀಡಿತ್ತು. ಬೆಳಗಾವಿ, ಉತ್ತರ ಕನ್ನಡ, ಹುಬ್ಬಳ್ಳಿ ಧಾರವಾಡದಲ್ಲಿ ಬೆಳಿಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣವಿತ್ತು. ವಿಜಯಪುರ ಹಾಗೂ ಜಿಲ್ಲೆಯ ತಿಕೋಟದಲ್ಲಿ ಮಳೆಯಾಗಿದೆ. ಕಾರವಾರದಲ್ಲಿ ಬೆಳಿಗ್ಗೆ 20 ನಿಮಿಷ ಸಾಧಾರಣ ಮಳೆ ಸುರಿದಿದೆ.</p>.<p class="Subhead"><strong>ಸಾಧಾರಣ ಮಳೆ:</strong> ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ವಿವಿಧೆಡೆ ಸಾಧಾರಣ ಮಳೆಯಾಗಿದೆ.</p>.<p>ಮೂಡಿಗೆರೆ, ಕಳಸ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಿಗ್ಗಾ ಮತ್ತು ಕೆರೆಕಟ್ಟೆಯಲ್ಲಿ ತಲಾ 53 ಮಿ.ಮೀ, ಹರಿಹರಪುರದಲ್ಲಿ 50 ಮಿ.ಮೀ ಮಳೆ<br />ಯಾಗಿದೆ. ತುಂಗಾ ನದಿಯ ಹರಿವು ತುಸು ಏರಿಕೆಯಾಗಿದೆ. ಕೊಟ್ಟಿಗೆಹಾರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಹದ ಮಳೆಯಾಗಿದೆ.</p>.<p class="Subhead"><strong>ಧಾರಾಕಾರ ಮಳೆ: </strong>ಕಲಬುರ್ಗಿಯಲ್ಲಿ ಸಂಜೆ ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆಯಾಗಿದೆ.ಜಿಲ್ಲೆಯಅಫಜಲಪುರ ಮತ್ತು ಆಳಂದ ತಾಲ್ಲೂಕುಗಳಲ್ಲೂ ಉತ್ತಮ ಮಳೆಯಾಗಿದ್ದು, ಯಾದಗಿರಿಯಲ್ಲಿ ತುಂತುರು ಮಳೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಮಲೆನಾಡು ಸೇರಿದಂತೆ ಎಲ್ಲೆಡೆ ಮುಂಗಾರು ಮಳೆ ಕ್ಷೀಣಿಸಿದೆ. ಆದರೆ, ನೆರೆಯ ಮಹಾ<br />ರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಕೃಷ್ಣಾ ಹಾಗೂ ಅದರ ಉಪನದಿಗಳ ಒಳಹರಿವು ಹೆಚ್ಚಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ರಸ್ತೆ ಮಟ್ಟದ ಮೂರು ಸೇತುವೆಗಳ ಮೇಲೆ ನೀರು ಹರಿಯುತ್ತಿದೆ.</p>.<p>ಕೃಷ್ಣಾ ಮತ್ತು ಅದರ ಉಪನದಿಗಳಾದ ದೂಧ್ಗಂಗಾ, ವೇದಗಂಗಾ ಮತ್ತು ಪಂಚಗಂಗಾ ನದಿಗಳ ಒಳಹರಿವು ಹೆಚ್ಚಾಗಿದೆ. ಚಿಕ್ಕೋಡಿ ತಾಲ್ಲೂಕಿನ ಮಲಿಕವಾಡ ಹಾಗೂ ಮಹಾರಾಷ್ಟ್ರದ ದತ್ತವಾಡ ಗ್ರಾಮಗಳ ಮಧ್ಯೆ ಇರುವ ಸೇತುವೆ, ನಿಪ್ಪಾಣಿ ತಾಲ್ಲೂಕಿನ ಭೋಜವಾಡಿ-ಕುನ್ನೂರ ಗ್ರಾಮಗಳ ನಡುವಿನ ಸೇತುವೆ ಹಾಗೂ ಕಾರದಗಾ–ಭೋಜ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳ ಮೇಲೆ ನೀರು ಹರಿಯುತ್ತಿದೆ. ಈ ಸೇತುವೆಗಳಿಗೆ ಪರ್ಯಾಯ ಮಾರ್ಗಗಳಿದ್ದು, ಜನರ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ.</p>.<p>ರಾಜಾಪುರ ಬ್ಯಾರೇಜ್ನಿಂದ 23 ಸಾವಿರ ಕ್ಯುಸೆಕ್ ನೀರು ಕೃಷ್ಣಾ ನದಿಗೆ ಸೇರುತ್ತಿದೆ. ರಾಜಾಪುರ ಬ್ಯಾರೇಜ್ನ ಎಲ್ಲ 36 ಗೇಟ್ಗಳನ್ನು ತೆರೆಯಲಾಗಿದೆ.</p>.<p class="Subhead"><strong>ಮಳೆ ಕ್ಷೀಣ:</strong> ಎರಡು ದಿನಗಳಿಂದ ಸತತ ಸುರಿದ ಮಳೆ ಸೋಮವಾರ ಬಿಡುವು ನೀಡಿತ್ತು. ಬೆಳಗಾವಿ, ಉತ್ತರ ಕನ್ನಡ, ಹುಬ್ಬಳ್ಳಿ ಧಾರವಾಡದಲ್ಲಿ ಬೆಳಿಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣವಿತ್ತು. ವಿಜಯಪುರ ಹಾಗೂ ಜಿಲ್ಲೆಯ ತಿಕೋಟದಲ್ಲಿ ಮಳೆಯಾಗಿದೆ. ಕಾರವಾರದಲ್ಲಿ ಬೆಳಿಗ್ಗೆ 20 ನಿಮಿಷ ಸಾಧಾರಣ ಮಳೆ ಸುರಿದಿದೆ.</p>.<p class="Subhead"><strong>ಸಾಧಾರಣ ಮಳೆ:</strong> ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ವಿವಿಧೆಡೆ ಸಾಧಾರಣ ಮಳೆಯಾಗಿದೆ.</p>.<p>ಮೂಡಿಗೆರೆ, ಕಳಸ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಿಗ್ಗಾ ಮತ್ತು ಕೆರೆಕಟ್ಟೆಯಲ್ಲಿ ತಲಾ 53 ಮಿ.ಮೀ, ಹರಿಹರಪುರದಲ್ಲಿ 50 ಮಿ.ಮೀ ಮಳೆ<br />ಯಾಗಿದೆ. ತುಂಗಾ ನದಿಯ ಹರಿವು ತುಸು ಏರಿಕೆಯಾಗಿದೆ. ಕೊಟ್ಟಿಗೆಹಾರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಹದ ಮಳೆಯಾಗಿದೆ.</p>.<p class="Subhead"><strong>ಧಾರಾಕಾರ ಮಳೆ: </strong>ಕಲಬುರ್ಗಿಯಲ್ಲಿ ಸಂಜೆ ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆಯಾಗಿದೆ.ಜಿಲ್ಲೆಯಅಫಜಲಪುರ ಮತ್ತು ಆಳಂದ ತಾಲ್ಲೂಕುಗಳಲ್ಲೂ ಉತ್ತಮ ಮಳೆಯಾಗಿದ್ದು, ಯಾದಗಿರಿಯಲ್ಲಿ ತುಂತುರು ಮಳೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>