ರಾಯಚೂರು: ಹೈ.ಕ. ಭಾಗಕ್ಕೆ ಗದಗ ಜಿಲ್ಲೆ ರೋಣ ತಾಲ್ಲೂಕಿನ 60 ಗ್ರಾಮಗಳನ್ನು ಸೇರ್ಪಡೆ ಮಾಡುವುದಕ್ಕೆ ಸಚಿವ ಸಂಪುಟವು ಕಳೆದ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದಕ್ಕೆ ಸಂಘ–ಸಂಸ್ಥೆಗಳಿಂದ ಭಾರಿ ವಿರೋಧ ವ್ಯಕ್ತವಾಗಿದೆ.
ಹೈ.ಕ. ಭಾಗದ ಎಲ್ಲ ಜಿಲ್ಲೆಗಳಲ್ಲೂ ಬುಧವಾರದಿಂದ ಸರ್ಕಾರದ ವಿರುದ್ಧ ಹೋರಾಟಗಳು ನಡೆಯಲಿವೆ. ಈ ಬಗ್ಗೆ ವಿವಿಧ ಸಂಘಟನೆಗಳ ಮುಖಂಡರು ರಾಯಚೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದರು.
ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಕಾರ್ಯದರ್ಶಿ ಪ್ರೊ.ರಜಾಕ್ ಉಸ್ತಾದ್ ಸೇರಿದಂತೆ ಕನ್ನಡ ಸಂಘಟನೆ ಹಾಗೂ ದಲಿತ ಸಂಘಟನೆಗಳ ಮುಖಂಡರು ಇದ್ದರು.