ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿರುಸಿನ ಮಳೆ: ಚಾವಣಿ ಕುಸಿದು ಮೂವರ ಸಾವು

Last Updated 6 ಅಕ್ಟೋಬರ್ 2019, 20:13 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಉತ್ತರ ಕನ್ನಡ, ಧಾರವಾಡ, ಬಾಗಲಕೋಟೆ, ಗದಗ, ವಿಜಯಪುರ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಯ ವಿವಿಧೆಡೆ ಶನಿವಾರ ರಾತ್ರಿಯಿಂದ ಭಾನುವಾರದ ಬೆಳಗಿನವರೆಗೆ ಧಾರಾಕಾರ ಮಳೆ ಸುರಿಯಿತು.

ಬಾಗಲಕೋಟೆ ತಾಲ್ಲೂಕಿನ ಕಿರಸೂರಿನಲ್ಲಿ ಮನೆ ಚಾವಣಿ ಕುಸಿದು ಒಂದೇ ಕುಟುಂಬದ ಮೂವರು ಮೃತರಾಗಿದ್ದಾರೆ. ಹುಬ್ಬಳ್ಳಿಯ ಬೈರಿದೇವರಕೊಪ್ಪದ ಅಗಸಿ ಓಣಿಯಲ್ಲಿ ಮನೆ ಕುಸಿದು ದಂಪತಿ ಗಾಯಗೊಂಡಿದ್ದಾರೆ. ಹಳೇ ಹುಬ್ಬಳ್ಳಿಯ ಕೃಷ್ಣಾಪುರ ಓಣಿಯಲ್ಲಿ ಮಳೆಗೆ ನಾಲ್ಕು ಮನೆಗಳು ಕುಸಿದಿವೆ.

ವಿಜಯಪುರ ಜಿಲ್ಲೆ ನಿಡಗುಂದಿಯಲ್ಲಿ ಸಿಡಿಲು ಬಡಿದು ಹಸು ಮೃತಪಟ್ಟಿದೆ. ಮಲಪ್ರಭಾ ನದಿ ಹರಿವು ಹೆಚ್ಚಾದ ಪರಿಣಾಮ ಗದಗ ಜಿಲ್ಲೆಯ ಹೊಳೆ
ಆಲೂರು–ಬಾದಾಮಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹೊಳೆಆಲೂರಿನಲ್ಲಿ ನೆರೆ ಸಂತ್ರಸ್ತರ ಆಶ್ರಯ ಮನೆಗಳಿಗೆ ಮಳೆ ನೀರು ನುಗ್ಗಿ ಸಮಸ್ಯೆಯಾಗಿದೆ. ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯಲ್ಲಿ ಮಳೆಗೆ 14 ಮನೆಗಳು ಹಾನಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT