ನಿಗದಿಯಂತೆ ಸಂಜೆ 6 ಗಂಟೆಗೆ ಕುದ್ರೋಳಿ ದೇವಸ್ಥಾನಕ್ಕೆ ಬಂದು ಈ ಬಾರಿಯ ಮಂಗಳೂರು ದಸರಾಕ್ಕೆ ವಿಧ್ಯುಕ್ತ ಚಾಲನೆ ನೀಡಬೇಕಿತ್ತು. ಆದರೆ ಸಂಜೆ 6.30ರ ವೇಳೆಗೆ ಅವರು ದೇವಸ್ಥಾನದತ್ತ ಬರುತ್ತಿದ್ದಂತೆಯೇ ಭಾರಿ ಮಳೆಯೂ ಆರಂಭವಾಯಿತು. ಇದರಿಂದಾಗಿ ಭಾರಿ ಸಂಚಾರ ದಟ್ಟಣೆ ಉಂಟಾಗಿ ಸುಮಾರು 15 ನಿಮಿಷ ಅವರು ರಸ್ತೆಯಲ್ಲೇ ಸಿಕ್ಕಿಹಾಕಿಕೊಳ್ಳುವಂತಾಯಿತು.