ಕೊಡಗು, ದಕ್ಷಿಣ ಕನ್ನಡ, ಹಾಸನ ಮತ್ತು ಕೇರಳದ ವಯನಾಡ್ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆಯಾಗುವ ಸಂಭವವಿದೆ. ಮಂದಿನ ಎರಡು, ಮೂರು ದಿನ ವೇಗವಾಗಿ ಗಾಳಿಯೂ ಬೀಸಲಿದೆ. ಜತೆಗೆ, ಮಳೆಯೂ ಸುರಿಯುವ ಮುನ್ಸೂಚನೆಯಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕರು ತಿಳಿಸಿದ್ದಾರೆ.
ಈ ವರ್ಷ ಮುಂಗಾರು ನಿಧಾನವಾಗಿ ಜಿಲ್ಲೆಯನ್ನು ಪ್ರವೇಶಿಸುತ್ತಿದೆ. ಕಳೆದ ವರ್ಷ ಜೂನ್ ಮೊದಲ ವಾರದಲ್ಲಿ ಜಿಲ್ಲೆಗೆ ಮುಂಗಾರು ಕಾಲಿಟ್ಟಿತ್ತು. ಕಳೆದ ವರ್ಷ ಭಾರೀ ಮಳೆಯಿಂದ ಭೂಕುಸಿತ ಹಾಗೂ ಪ್ರವಾಹ ಸ್ಥಿತಿ ಉಂಟಾಗಿತ್ತು.