<p><strong>ವಿರಾಜಪೇಟೆ:</strong> ಕೊಡಗಿನ ವಿವಿಧೆಡೆ ಬುಧವಾರ ಬಿಡುವು ಕೊಟ್ಟು ಧಾರಾಕಾರ ಮಳೆ ಸುರಿಯಿತು. ದಟ್ಟವಾದ ಮೋಡ ಕವಿದ ವಾತಾವರಣವಿದ್ದು ಜಿಲ್ಲೆಗೆ ಮುಂಗಾರು ಪ್ರವೇಶಿಸಿದ ಲಕ್ಷಣ ಕಂಡುಬಂದಿದೆ.</p>.<p>ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಗೆ ಅಲ್ಲಲ್ಲಿ ಮರಗಳು ಉರುಳಿ ಬಿದ್ದು ಗ್ರಾಮೀಣ ಪ್ರದೇಶಕ್ಕೆ ವಿದ್ಯುತ್ ಪೂರೈಕೆ ಸ್ಥಗಿತವಾಗಿದೆ. ಮಡಿಕೇರಿ, ಗೋಣಿಕೊಪ್ಪಲು, ಬಿರುನಾಣಿ, ಪೊನ್ನಂಪೇಟೆ, ಭಾಗಮಂಡಲ, ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ ಅಬ್ಬರಿಸಿದೆ. </p>.<p>ಗಾಳಿಗೆ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲದ ಅಂಗನವಾಡಿ ಕೇಂದ್ರದ ಮೇಲೆ ಬೃಹತ್ ಮರ ಬಿದ್ದು ಚಾವಣಿ ಕುಸಿದಿದೆ. ಮುಂಜಾನೆ ಮರಬಿದ್ದ ಪರಿಣಾಮ ಯಾವುದೇ ಅನಾಹುತ ಸಂಭವಿಸಿಲ್ಲ. ತಿತಿಮತಿ ನಿವಾಸಿ ಸುಕುಮಾರ್ ಅವರ ಮನೆಯ ಮೇಲೂ ಗಾಳಿಗೆ ಮರ ಬಿದ್ದು ಜಖಂಗೊಂಡಿದೆ. ಈ ಮನೆಯಲ್ಲೂ ಯಾರೂ ಇರಲಿಲ್ಲ.</p>.<p>ಪೊನ್ನಪ್ಪಸಂತೆ – ಕೋಣನಕಟ್ಟೆ ಮಾರ್ಗದಲ್ಲಿ ಮರ ಬಿದ್ದು ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಮರ ತೆರೆವುಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಲಾಯಿತು.</p>.<p>ಕಳೆದ 24 ಗಂಟೆಯ ಅವಧಿಯಲ್ಲಿ ವಿರಾಜಪೇಟೆಯಲ್ಲಿ 55 ಮಿ.ಮೀ, ಅಮ್ಮತ್ತಿ 72, ಭಾಗಮಂಡಲ 33, ಹುದಿಕೇರಿ 24 ಮಿ.ಮೀ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ:</strong> ಕೊಡಗಿನ ವಿವಿಧೆಡೆ ಬುಧವಾರ ಬಿಡುವು ಕೊಟ್ಟು ಧಾರಾಕಾರ ಮಳೆ ಸುರಿಯಿತು. ದಟ್ಟವಾದ ಮೋಡ ಕವಿದ ವಾತಾವರಣವಿದ್ದು ಜಿಲ್ಲೆಗೆ ಮುಂಗಾರು ಪ್ರವೇಶಿಸಿದ ಲಕ್ಷಣ ಕಂಡುಬಂದಿದೆ.</p>.<p>ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಗೆ ಅಲ್ಲಲ್ಲಿ ಮರಗಳು ಉರುಳಿ ಬಿದ್ದು ಗ್ರಾಮೀಣ ಪ್ರದೇಶಕ್ಕೆ ವಿದ್ಯುತ್ ಪೂರೈಕೆ ಸ್ಥಗಿತವಾಗಿದೆ. ಮಡಿಕೇರಿ, ಗೋಣಿಕೊಪ್ಪಲು, ಬಿರುನಾಣಿ, ಪೊನ್ನಂಪೇಟೆ, ಭಾಗಮಂಡಲ, ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ ಅಬ್ಬರಿಸಿದೆ. </p>.<p>ಗಾಳಿಗೆ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲದ ಅಂಗನವಾಡಿ ಕೇಂದ್ರದ ಮೇಲೆ ಬೃಹತ್ ಮರ ಬಿದ್ದು ಚಾವಣಿ ಕುಸಿದಿದೆ. ಮುಂಜಾನೆ ಮರಬಿದ್ದ ಪರಿಣಾಮ ಯಾವುದೇ ಅನಾಹುತ ಸಂಭವಿಸಿಲ್ಲ. ತಿತಿಮತಿ ನಿವಾಸಿ ಸುಕುಮಾರ್ ಅವರ ಮನೆಯ ಮೇಲೂ ಗಾಳಿಗೆ ಮರ ಬಿದ್ದು ಜಖಂಗೊಂಡಿದೆ. ಈ ಮನೆಯಲ್ಲೂ ಯಾರೂ ಇರಲಿಲ್ಲ.</p>.<p>ಪೊನ್ನಪ್ಪಸಂತೆ – ಕೋಣನಕಟ್ಟೆ ಮಾರ್ಗದಲ್ಲಿ ಮರ ಬಿದ್ದು ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಮರ ತೆರೆವುಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಲಾಯಿತು.</p>.<p>ಕಳೆದ 24 ಗಂಟೆಯ ಅವಧಿಯಲ್ಲಿ ವಿರಾಜಪೇಟೆಯಲ್ಲಿ 55 ಮಿ.ಮೀ, ಅಮ್ಮತ್ತಿ 72, ಭಾಗಮಂಡಲ 33, ಹುದಿಕೇರಿ 24 ಮಿ.ಮೀ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>