ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ವರುಣನ ಅಬ್ಬರಕ್ಕೆ ಬುಧವಾರ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಭೂಕುಸಿತವಾಗಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಗ್ರಾಮೀಣ ಪ್ರದೇಶದ ಜನರು ಮೊಬೈಲ್ ನೆಟ್ವರ್ಕ್, ವಿದ್ಯುತ್ ಇಲ್ಲದೆ ಪರದಾಡುವಂತಾಗಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮುಂದುವರೆದಿದ್ದು, ಆಗಸ್ಟ್ 8 ಹಾಗೂ 9ರಂದು ಜಿಲ್ಲೆಯ ಶಾಲಾ ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಡಳಿತ ತೀವ್ರ ನಿಗಾ ವಹಿಸಿದೆ.