ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ.
ಬೆಳಿಗ್ಗೆಯಿಂದ ಮಧ್ಯಾಹ್ನ 2ರ ತನಕವೂ ಬಿರುಸಾಗಿದ್ದ ಮಳೆ, ಬಳಿಕ ಸ್ವಲ್ಪ ಬಿಡುವು ಕೊಟ್ಟಿತು.
ತಲಕಾವೇರಿ, ಸುಂಟಿಕೊಪ್ಪ, ನಾಪೋಕ್ಲು, ಅಪ್ಪಂಗಳ, ಚೇರಂಬಾಣೆ, ಗೋಣಿಕೊಪ್ಪಲು, ಶ್ರೀಮಂಗಲ, ಕುಟ್ಟ ಭಾಗದಲ್ಲಿ ಮಳೆಯಾಗಿದೆ.
ಸೋಮವಾರ ದಿನವಿಡೀ ಸುರಿದ ಭಾರಿ ಮಳೆಗೆ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನಮಟ್ಟ ಏರಿಕೆಯಾಗಿದೆ. ವಿರಾಜಪೇಟೆ ನಗರ 2ನೇ ವಾರ್ಡ್ನಲ್ಲಿ ತಡೆಗೋಡೆ ಕುಸಿದಿದೆ. ಇದರಿಂದ 10 ಮನೆಗಳು ಅಪಾಯಕ್ಕೆ ಸಿಲುಕಿದ್ದು, ಸ್ಥಳೀಯ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.
ಮೈಸೂರು, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗಿದೆ.