ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು, ನಾಳೆ ಸಾಧಾರಣ ಮಳೆ ಸಾಧ್ಯತೆ

Last Updated 13 ಆಗಸ್ಟ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಇದೇ 14 ಮತ್ತು 15ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.‌

ಕರಾವಳಿ ಭಾಗದಲ್ಲಿ ಪಶ್ಚಿಮ ಹಾಗೂ ನೈರುತ್ಯ ದಿಕ್ಕಿನಿಂದ ಗಂಟೆಗೆ 45ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, 3.0 ರಿಂದ3.3 ಮೀಟರ್‌ನಷ್ಟು ಎತ್ತರದ ಅಲೆಗಳೂ ಏಳುತ್ತಿವೆ. ಹೀಗಾಗಿ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 48 ಗಂಟೆ ಅವಧಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ತಾಪಮಾನ ಗರಿಷ್ಠ 27, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ 14 ಸೆಂ.ಮೀ.ಮಳೆಯಾಗಿದೆ. ಪಣಂಬೂರು 13, ಬಂಟ್ವಾಳ 12, ಭಾಗಮಂಡಲ 10, ಕೊಲ್ಲೂರು, ಭಟ್ಕಳದಲ್ಲಿ ತಲಾ 9, ಮೂಡುಬಿದರೆ 8, ಕಾರ್ಕಳ, ಕುಂದಾಪುರ ಹಾಗೂ ಆಗುಂಬೆಯಲ್ಲಿ ತಲಾ 7 ಸೆಂ.ಮೀ.ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT