ತುಮಕೂರು ಜಿಲ್ಲೆಯ ಹುಲಿಯೂರುದುರ್ಗದಲ್ಲಿ ಹೊಲದಲ್ಲಿ ರಾಸುಗಳಿಗೆ ಹುಲ್ಲು ಕೊಯ್ಯುತ್ತಿದ್ದ ಮಾದುಗೋನಹಳ್ಳಿ ಚಿಕ್ಕಯ್ಯ (58) ಮಂಗಳವಾರ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿ ಕಸುವಿನಹಳ್ಳಿ ಗ್ರಾಮದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಮಳೆಯಿಂದ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದ ಸಂದರ್ಭದಲ್ಲಿ ಪುಟ್ಟತಾಯಮ್ಮ (62) ಎಂಬುವರಿಗೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.