ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ವಿವಿಧೆಡೆ ಭಾರಿ ಮಳೆ: ಅಡಿಕೆ, ತೆಂಗಿನ ಮರಗಳು ನೆಲಕ್ಕೆ

ಕೆಲವೆಡೆ ಸಂಚಾರಕ್ಕೆ ಅಡ್ಡಿ
Last Updated 2 ಜೂನ್ 2020, 1:40 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧ ಭಾಗದಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿದಿದ್ದು, ಬೆಳೆಗೆ ಹಾನಿಯಾಗಿದೆ.

ಧಾರವಾಡ, ಬಳ್ಳಾರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿಯಲ್ಲಿ ಸೋಮವಾರ ಭಾರಿ ಮಳೆಯಾಗಿದೆ.

ಬೆಳಗಾವಿಯಬೈಲಹೊಂಗಲದಲ್ಲಿ ಭಾನುವಾರ ರಾತ್ರಿಯಿಡಿ ಸುರಿದ ಮಳೆ ಸೋಮವಾರವೂ ಮುಂದುವರಿಯಿತು. ಗೋಕಾಕದ ಲಕ್ಷ್ಮಿ ಬಡಾವಣೆಯ ಮುಖ್ಯ ರಸ್ತೆಗೆ ಅಡ್ಡಲಾಗಿ ನಿರ್ಮಿಸಿದ ಸೇತುವೆ ಮೇಲೆ ಮಳೆ ನೀರು ನಿಂತು ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಯಿತು.

ಶುಕ್ರವಾರ ರಾತ್ರಿಯಿಂದ ‌ಸೋಮವಾರ ಬೆಳಗಿನ ಜಾವದವರೆಗೆ ಕಲಬುರ್ಗಿ ಜಿಲ್ಲೆಯಲ್ಲಿ ಸರಾಸರಿ 10 ಮಿ.ಮೀ. ಮಳೆ ಬಿದ್ದಿದ್ದು, ಕಲಬುರ್ಗಿ ತಾಲ್ಲೂಕಿನ ಫರಹತಾಬಾದ್‌ನಲ್ಲಿ 25 ಮಿ.ಮೀ., ಚಿತ್ತಾಪುರ ಹೋಬಳಿಯಲ್ಲಿ 20 ಮಿ.ಮೀ. ಮಳೆ ಸುರಿದಿದೆ. ಸೇಡಂತಾಲ್ಲೂಕಿನಲ್ಲಿಯೂ ಉತ್ತಮ ಮಳೆಯಾಗಿದೆ.

ಯಾದಗಿರಿ ಜಿಲ್ಲೆಯಶಹಾಪುರ, ಸುರಪುರದಲ್ಲಿ ಉತ್ತಮ ಮಳೆಯಾಗಿದೆ.ಸುರಪುರದಲ್ಲಿ 31.4 ಮಿ.ಮೀ.,ಶಹಾಪುರದಲ್ಲಿ 20.2 ಮಿ.ಮೀ., ನಾರಾಯಣಪುರ 13.8, ಕೆಂಭಾವಿಯಲ್ಲಿ 10 ಮಿ.ಮೀ ಮಳೆ ಸುರಿದಿದೆ.

ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆಯಾಗಿದೆ.ಬಕ್ಕ, ಚೇರಂಬಾಣೆ, ಭಾಗಮಂಡಲ, ತಲಕಾವೇರಿ, ನಾಪೋಕ್ಲು ಭಾಗದಲ್ಲಿ ಜೋರು ಮಳೆಯಾಗಿದೆ.ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಮಧ್ಯಾಹ್ನ ಒಂದು ಗಂಟೆಗೂ ಹೆಚ್ಚು ಹೊತ್ತು ಧಾರಾಕಾರ ಮಳೆಯಾಗಿದೆ.

ಶಿವಮೊಗ್ಗ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಜೋರು ಮಳೆಯಾಗಿದೆ.ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣ ಸೇರಿ ತಾಲ್ಲೂಕಿನ ಕಸಬಾ ಹೋಬಳಿಯ ಹಲವು ಗ್ರಾಮಗಳಲ್ಲಿ ಧಾರಾಕಾರ ಮಳೆಯಾಗಿದೆ.ಚಳ್ಳಕೆರೆ ತಾಲ್ಲೂಕಿನಲ್ಲೂ ಧಾರಾಕಾರ ಮಳೆಯಾ
ಗಿದ್ದು, ಭಾನುವಾರ ರಾತ್ರಿ ಸುರಿದ ಬಿರುಗಾಳಿ, ಮಳೆಗೆ ಹಲವೆಡೆ ಬೆಳೆಹಾನಿಯಾಗಿದೆ.

ದಾವಣಗೆರೆಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಭಾನುವಾರ ತಡ ರಾತ್ರಿ ಚದುರಿದಂತೆ ಮಳೆಯಾಗಿದೆ. ಮಳೆಗೆ ಅಡಿಕೆ, ಬಾಳೆ ಹಾಗೂ ಹಲವಾರು ಮನೆಗಳಿಗೆ ಭಾಗಶಃ ಹಾನಿಯಾಗಿದೆ.ಬಸವಾಪಟ್ಟಣ ಸಮೀಪದ ಕಾರಿಗನೂರಿನಲ್ಲಿ ಭಾನುವಾರ ರಾತ್ರಿ ಬೀಸಿದ ಭಾರಿ ಬಿರುಗಾಳಿಗೆ ಸುಮಾರು 250 ಎಕರೆ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಸಹಸ್ರಾರು ಅಡಿಕೆ, ಬಾಳೆ, ತೆಂಗು ಮತ್ತು ತೇಗದ ಮರಗಳು ನೆಲಕ್ಕುರುಳಿವೆ. ನಾಲ್ಕು ಮನೆಗಳು ಸಂಪೂರ್ಣವಾಗಿ ನೆಲಕಚ್ಚಿವೆ. ಕಾರಿಗನೂರು ಕ್ರಾಸ್‌ ಸಮೀಪದ ಬೆಲ್ಲ ತಯಾ
ರಿಕಾ ಘಟಕದ ಚಾವಣಿ ಹಾರಿ ಹೋಗಿದೆ.

ಕರಾವಳಿಯಲ್ಲಿ ಉತ್ತಮ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸರಾಸರಿ 6.86 ಮಿ.ಮೀ. ಮಳೆಯಾಗಿದೆ.ಕಳೆದ ವರ್ಷ ಭಾರಿ ಮಳೆಗೆ ಭೂ ಕುಸಿತ ಕಂಡಿದ್ದ ಬೆಳ್ತಂಗಡಿಯಲ್ಲಿ ಸೋಮವಾರ 12.3 ಮಿ.ಮೀ. ಮಳೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಮೋಡಕವಿದ ವಾತಾವರಣವಿದ್ದು, ಆಗಾಗ ತುಂತುರು ಮಳೆ ಸುರಿಯಿತು.ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆ ಹಾರ ಭಾಗದಲ್ಲಿ ನಸುಕಿನಿಂದಲೂ ಧಾರಾಕಾರವಾಗಿ ಸುರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT