<p><strong>ಬೆಂಗಳೂರು:</strong> ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ ಹಾಗೂ ಹಳೇ ಮೈಸೂರು ಭಾಗದ ಕೆಲವೆಡೆ ಸೋಮವಾರ ಹಾಗೂ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಅಪಾರ ಪ್ರಮಾಣದ ಬೆಳೆಹಾನಿಯೂ ಸಂಭವಿಸಿದೆ. ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿದ್ದಾರೆ.</p>.<p>ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನಾದ್ಯಂತ ಕಳೆದ ನಾಲ್ಕು ದಿನಗಳಿಂದ ಧಾರಾಕಾರ ಮಳೆಯಾಗಿದೆ. ಜತೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ವಿವಿಧ ಬೆಳೆಗಳು ಹಾಳಾಗಿವೆ. ಟೆಂಗುಂಟಿ ಸೇರಿ ಕೆಲ ಗ್ರಾಮಗಳು ಜಲಾವೃತಗೊಂಡಿವೆ.</p>.<p>ಹಿರೇಮನ್ನಾಪುರ ಗ್ರಾಮದಲ್ಲಿ ಈರುಳ್ಳಿ, ಹತ್ತಿ, ಸಜ್ಜೆ, ಮೆಕ್ಕೆಜೋಳ, ತರಕಾರಿ ಬೆಳೆ, ಬೀಜೋತ್ಪಾದನೆ ಮಾಡುವ ಘಟಕದ ಬೆಳೆಗಳು ನಾಶವಾಗಿವೆ. ಬಳೂಟಗಿ, ಕುಷ್ಟಗಿ, ತಳುವಗೇರಾ, ಬಿಜಕಲ್ಲ, ತಾವರಗೇರಾ, ಹೊನಗಡ್ಡಿ, ನಿಡಶೇಸಿ ಮತ್ತು ಕುಷ್ಟಗಿಯ ಶಾಖಾಪುರ ರಸ್ತೆಯಲ್ಲಿನ ಮನೆ, ಗುಡಿಸಲುಗಳು ಜಲಾವೃತಗೊಂಡವು.</p>.<p>ರಾಯಚೂರು ಜಿಲ್ಲೆಯ ಮುದಗಲ್ ಬಳಿ ಸೋಮವಾರ ಸುರಿದ ಭಾರಿ ಮಳೆಗೆ ತಲೆಕಟ್ಟು ಗ್ರಾಮದ ಮುಖ್ಯರಸ್ತೆಯಲ್ಲಿನ ಸೇತುವೆ ಮುಳುಗಡೆಯಾಗಿ ಕೆಲ ಹೊತ್ತು ವಾಹನಗಳ ಸಂಚಾರಕ್ಕೆ ಅಡಚಣೆಯಾಯಿತು.</p>.<p>ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕೆಳದಂಡೆ ಮುಲ್ಲಾಮಾರಿ ಯೋಜನೆಯ ಗರಿಷ್ಠ 491 ಮೀಟರ್ ಎತ್ತರದ ನಾಗರಾಳ ಜಲಾಶಯ ಭರ್ತಿಯಾಗಿದ್ದು ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗಿದೆ.</p>.<p>ಧಾರವಾಡ, ಉತ್ತರ ಕನ್ನಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಂಗಳವಾರ ಗುಡುಗು ಸಹಿತ ಮಳೆಯಾಗಿದೆ. ಹುಬ್ಬಳ್ಳಿ ಮತ್ತು ಧಾರವಾಡ ಅವಳಿ ನಗರಗಳಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆ ಸುರಿಯಿತು.</p>.<p>ವಿಜಯಪುರ ಜಿಲ್ಲೆಯ ಕಲಕೇರಿ ಗ್ರಾಮದ ರೈತ ಚನ್ನಪ್ಪ ಗುರಪ್ಪ ರೂಡಗಿ (48) ಸಿಡಿಲು ಬಡಿದು ಮೃತಪಟ್ಟಿದ್ದಾರೆ.</p>.<p>ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನಲ್ಲಿ ಧಾರಾಕಾರ ಮಳೆ ಸುರಿದು, ಸಂಡೂರು ತಾಲ್ಲೂಕಿನ ತೋರಣಗಲ್ಲು ಹೋಬಳಿಯ ಗ್ರಾಮಗಳು, ಜಮೀನು ಜಲಾವೃತವಾಗಿದ್ದವು.ಉತ್ತರ ಕನ್ನಡ ಜಿಲ್ಲೆಯ<br />ಭಟ್ಕಳ ತಾಲ್ಲೂಕಿನ ಹೊನ್ನಗದ್ದೆಯಲ್ಲಿಯೂ ಸಿಡಿಲಿನಿಂದಾಗಿ ಮೂರು ಮನೆಗಳಿಗೆ ಹಾನಿಯಾಗಿದ್ದು, ವಿದ್ಯುತ್ ಉಪಕರಣಗಳೆಲ್ಲ ಹಾಳಾಗಿವೆ.</p>.<p>ಶಿರಸಿ ತಾಲ್ಲೂಕಿನ ಮಂಜುಗುಣಿ, ಕಲ್ಲಳ್ಳಿ, ತೆಪ್ಪಾರ, ಖೂರ್ಸೆ ಸುತ್ತಮುತ್ತ ಸೋಮವಾರ ಸಂಜೆ ಭಾರಿ ಮಳೆಯಾಯಿತು.</p>.<p>ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಯ ವಿವಿಧೆಡೆ ಸೋಮವಾರ ರಾತ್ರಿ ಹಾಗೂ ಮಂಗಳವಾರ ಬೆಳಿಗ್ಗೆ ಭಾರಿ ಮಳೆಯಾಗಿದೆ.</p>.<p>ಮೈಸೂರಿನಲ್ಲಿ ಸೋಮವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ಹುಣಸೂರು ತಾಲ್ಲೂಕಿನಲ್ಲಿ ಗುಡುಗು–ಸಿಡಿಲು ಸಹಿತ ಮಳೆ ಆರ್ಭಟಿಸಿದ್ದು, ಹುಣಸೂರಿನ ತಗ್ಗು ಪ್ರದೇಶಗಳಲ್ಲಿನ ಹಲವು ಮನೆಗಳಿಗೆ ನೀರು ನುಗ್ಗಿದೆ.</p>.<p>ಹಾಸನದಲ್ಲಿ ಸೋಮವಾರ ರಾತ್ರಿಯಿಂದ ಸುರಿದ ಮಳೆಗೆ ಟಿಪ್ಪು ನಗರದಲ್ಲಿನ ಎರಡು ಮನೆಗಳ ಗೋಡೆ ಕುಸಿದಿವೆ. ಸಕಲೇಶಪುರ ಪಟ್ಟಣದಲ್ಲಿ, ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನಲ್ಲಿ ಸಂಜೆ ಮಳೆಯಾಗಿದೆ.</p>.<p>ಮಂಡ್ಯ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಕೆರೆಗಳು ತುಂಬಿ ಕೋಡಿ ಬಿದ್ದಿವೆ. ಕೆಲವೆಡೆ ಮನೆಗಳು ಕುಸಿದು ಬಿದ್ದಿದ್ದರೆ, ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು<br />ಸಂಕಷ್ಟಕ್ಕೀಡಾಗಿದ್ದಾರೆ.</p>.<p>ಚಾಮರಾಜನಗರ ಸೇರಿದಂತೆ ಜಿಲ್ಲೆಯ ಕೊಳ್ಳೇಗಾಲ, ಮಹದೇಶ್ವರ ಬೆಟ್ಟ, ಸಂತೇಮರಹಳ್ಳಿ, ಗುಂಡ್ಲುಪೇಟೆಯಲ್ಲೂ ಸೋಮವಾರ ರಾತ್ರಿ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ ಹಾಗೂ ಹಳೇ ಮೈಸೂರು ಭಾಗದ ಕೆಲವೆಡೆ ಸೋಮವಾರ ಹಾಗೂ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಅಪಾರ ಪ್ರಮಾಣದ ಬೆಳೆಹಾನಿಯೂ ಸಂಭವಿಸಿದೆ. ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿದ್ದಾರೆ.</p>.<p>ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನಾದ್ಯಂತ ಕಳೆದ ನಾಲ್ಕು ದಿನಗಳಿಂದ ಧಾರಾಕಾರ ಮಳೆಯಾಗಿದೆ. ಜತೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ವಿವಿಧ ಬೆಳೆಗಳು ಹಾಳಾಗಿವೆ. ಟೆಂಗುಂಟಿ ಸೇರಿ ಕೆಲ ಗ್ರಾಮಗಳು ಜಲಾವೃತಗೊಂಡಿವೆ.</p>.<p>ಹಿರೇಮನ್ನಾಪುರ ಗ್ರಾಮದಲ್ಲಿ ಈರುಳ್ಳಿ, ಹತ್ತಿ, ಸಜ್ಜೆ, ಮೆಕ್ಕೆಜೋಳ, ತರಕಾರಿ ಬೆಳೆ, ಬೀಜೋತ್ಪಾದನೆ ಮಾಡುವ ಘಟಕದ ಬೆಳೆಗಳು ನಾಶವಾಗಿವೆ. ಬಳೂಟಗಿ, ಕುಷ್ಟಗಿ, ತಳುವಗೇರಾ, ಬಿಜಕಲ್ಲ, ತಾವರಗೇರಾ, ಹೊನಗಡ್ಡಿ, ನಿಡಶೇಸಿ ಮತ್ತು ಕುಷ್ಟಗಿಯ ಶಾಖಾಪುರ ರಸ್ತೆಯಲ್ಲಿನ ಮನೆ, ಗುಡಿಸಲುಗಳು ಜಲಾವೃತಗೊಂಡವು.</p>.<p>ರಾಯಚೂರು ಜಿಲ್ಲೆಯ ಮುದಗಲ್ ಬಳಿ ಸೋಮವಾರ ಸುರಿದ ಭಾರಿ ಮಳೆಗೆ ತಲೆಕಟ್ಟು ಗ್ರಾಮದ ಮುಖ್ಯರಸ್ತೆಯಲ್ಲಿನ ಸೇತುವೆ ಮುಳುಗಡೆಯಾಗಿ ಕೆಲ ಹೊತ್ತು ವಾಹನಗಳ ಸಂಚಾರಕ್ಕೆ ಅಡಚಣೆಯಾಯಿತು.</p>.<p>ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕೆಳದಂಡೆ ಮುಲ್ಲಾಮಾರಿ ಯೋಜನೆಯ ಗರಿಷ್ಠ 491 ಮೀಟರ್ ಎತ್ತರದ ನಾಗರಾಳ ಜಲಾಶಯ ಭರ್ತಿಯಾಗಿದ್ದು ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗಿದೆ.</p>.<p>ಧಾರವಾಡ, ಉತ್ತರ ಕನ್ನಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಂಗಳವಾರ ಗುಡುಗು ಸಹಿತ ಮಳೆಯಾಗಿದೆ. ಹುಬ್ಬಳ್ಳಿ ಮತ್ತು ಧಾರವಾಡ ಅವಳಿ ನಗರಗಳಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆ ಸುರಿಯಿತು.</p>.<p>ವಿಜಯಪುರ ಜಿಲ್ಲೆಯ ಕಲಕೇರಿ ಗ್ರಾಮದ ರೈತ ಚನ್ನಪ್ಪ ಗುರಪ್ಪ ರೂಡಗಿ (48) ಸಿಡಿಲು ಬಡಿದು ಮೃತಪಟ್ಟಿದ್ದಾರೆ.</p>.<p>ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನಲ್ಲಿ ಧಾರಾಕಾರ ಮಳೆ ಸುರಿದು, ಸಂಡೂರು ತಾಲ್ಲೂಕಿನ ತೋರಣಗಲ್ಲು ಹೋಬಳಿಯ ಗ್ರಾಮಗಳು, ಜಮೀನು ಜಲಾವೃತವಾಗಿದ್ದವು.ಉತ್ತರ ಕನ್ನಡ ಜಿಲ್ಲೆಯ<br />ಭಟ್ಕಳ ತಾಲ್ಲೂಕಿನ ಹೊನ್ನಗದ್ದೆಯಲ್ಲಿಯೂ ಸಿಡಿಲಿನಿಂದಾಗಿ ಮೂರು ಮನೆಗಳಿಗೆ ಹಾನಿಯಾಗಿದ್ದು, ವಿದ್ಯುತ್ ಉಪಕರಣಗಳೆಲ್ಲ ಹಾಳಾಗಿವೆ.</p>.<p>ಶಿರಸಿ ತಾಲ್ಲೂಕಿನ ಮಂಜುಗುಣಿ, ಕಲ್ಲಳ್ಳಿ, ತೆಪ್ಪಾರ, ಖೂರ್ಸೆ ಸುತ್ತಮುತ್ತ ಸೋಮವಾರ ಸಂಜೆ ಭಾರಿ ಮಳೆಯಾಯಿತು.</p>.<p>ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಯ ವಿವಿಧೆಡೆ ಸೋಮವಾರ ರಾತ್ರಿ ಹಾಗೂ ಮಂಗಳವಾರ ಬೆಳಿಗ್ಗೆ ಭಾರಿ ಮಳೆಯಾಗಿದೆ.</p>.<p>ಮೈಸೂರಿನಲ್ಲಿ ಸೋಮವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ಹುಣಸೂರು ತಾಲ್ಲೂಕಿನಲ್ಲಿ ಗುಡುಗು–ಸಿಡಿಲು ಸಹಿತ ಮಳೆ ಆರ್ಭಟಿಸಿದ್ದು, ಹುಣಸೂರಿನ ತಗ್ಗು ಪ್ರದೇಶಗಳಲ್ಲಿನ ಹಲವು ಮನೆಗಳಿಗೆ ನೀರು ನುಗ್ಗಿದೆ.</p>.<p>ಹಾಸನದಲ್ಲಿ ಸೋಮವಾರ ರಾತ್ರಿಯಿಂದ ಸುರಿದ ಮಳೆಗೆ ಟಿಪ್ಪು ನಗರದಲ್ಲಿನ ಎರಡು ಮನೆಗಳ ಗೋಡೆ ಕುಸಿದಿವೆ. ಸಕಲೇಶಪುರ ಪಟ್ಟಣದಲ್ಲಿ, ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನಲ್ಲಿ ಸಂಜೆ ಮಳೆಯಾಗಿದೆ.</p>.<p>ಮಂಡ್ಯ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಕೆರೆಗಳು ತುಂಬಿ ಕೋಡಿ ಬಿದ್ದಿವೆ. ಕೆಲವೆಡೆ ಮನೆಗಳು ಕುಸಿದು ಬಿದ್ದಿದ್ದರೆ, ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು<br />ಸಂಕಷ್ಟಕ್ಕೀಡಾಗಿದ್ದಾರೆ.</p>.<p>ಚಾಮರಾಜನಗರ ಸೇರಿದಂತೆ ಜಿಲ್ಲೆಯ ಕೊಳ್ಳೇಗಾಲ, ಮಹದೇಶ್ವರ ಬೆಟ್ಟ, ಸಂತೇಮರಹಳ್ಳಿ, ಗುಂಡ್ಲುಪೇಟೆಯಲ್ಲೂ ಸೋಮವಾರ ರಾತ್ರಿ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>