<p><strong>ಕಲಬುರ್ಗಿ:</strong> ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳಲ್ಲಿ ಮಂಗಳವಾರ ಬಿರುಗಾಳಿ ಸಹಿತ ಮಳೆಯಾಗಿದೆ. ಹಿಂಗಾರು ಹಂಗಾಮಿಗೆ ಸಿದ್ಧತೆ ನಡೆಸಲು ರೈತರು ಮುಂದಾಗಿದ್ದಾರೆ.ಕಲಬುರ್ಗಿ ನಗರ ಸೇರಿದಂತೆ ಜಿಲ್ಲೆಯ ಸೇಡಂ, ಚಿಂಚೋಳಿ,ಕಾಳಗಿ, ಚಿತ್ತಾಪುರ, ಶಹಾಬಾದ್ ಹಾಗೂ ಯಡ್ರಾಮಿಯಲ್ಲಿ ಬಿರುಸಿನ ಮಳೆಯಾಯಿತು.</p>.<p>ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿನ ವಿವಿಧೆಡೆಸೋಮವಾರ ತಡರಾತ್ರಿ ಆಲಿಕಲ್ಲು ಮಳೆ ಸುರಿದು ಕೊಯ್ಲು ಹಂತದಲ್ಲಿದ್ದ ನೂರಾರು ಎಕರೆ ಭತ್ತ ಹಾಳಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ, ಕಾರಟಗಿ,ಹಿಟ್ನಾಳ ಹೋಬಳಿ, ಹುಲಿಗಿ ಮತ್ತು ಮುನಿರಾಬಾದ್ ವ್ಯಾಪ್ತಿಯಲ್ಲಿ ಮಳೆ ಸುರಿಯಿತು. ಹನುಮಸಾಗರದಲ್ಲಿ ಸಿಡಿಲಿಗೆ ಎತ್ತು ಬಲಿಯಾಗಿದೆ.</p>.<p>ಬೀದರ್ ಜಿಲ್ಲೆಯ ಬಸವಕಲ್ಯಾಣ, ಕಮಲನಗರದಲ್ಲಿ ಸೋಮವಾರ ತಡರಾತ್ರಿ ಮಳೆಯಾಗಿದೆ. ಔರಾದ್ನ ನಾಗೂರು (ಎಂ) ಗ್ರಾಮದಲ್ಲಿ ಸಿಡಿಲು ಬಡಿದು ಆಕಳು ಸಾವನ್ನಪ್ಪಿದೆ.ಯಾದಗಿರಿ ಜಿಲ್ಲೆಯ ಶಹಾಪುರ, ಸುರಪುರ, ಹುಣಸಗಿ, ಯರಗೋಳ, ಸೈದಾಪುರ, ವಡಗೇರಾದಲ್ಲಿಯೂ ಜಿಟಿ ಜಿಟಿ ಮಳೆಯಾಗಿದೆ.</p>.<p class="Subhead">ರೈತರಿಗೆ ಹರ್ಷ(ಚಿಕ್ಕಮಗಳೂರು ವರದಿ):ಮಲೆನಾಡು ಭಾಗದ ಕೊಪ್ಪ, ಬಾಳೆಹೊನ್ನೂರು, ಎನ್.ಆರ್.ಪುರ ಭಾಗದಲ್ಲಿಮಧ್ಯಾಹ್ನ ಸುಮಾರು ಅರ್ಧ ಗಂಟೆ ಉತ್ತಮ ಮಳೆಯಾಗಿದೆ. ರೈತರಲ್ಲಿ ಹರ್ಷ ಮೂಡಿಸಿದೆ.</p>.<p>ಹೆಬ್ರಿಯಲ್ಲಿ ಮಧ್ಯಾಹ್ನ ಅರ್ಧ ಗಂಟೆ, ಉಡುಪಿ, ಪಡುಬಿದ್ರಿ, ಬ್ರಹ್ಮಾವರ ಪ್ರದೇಶಗಳಲ್ಲಿ ಸಂಜೆ ಮಳೆ ಸುರಿದು ತಂಪಾಗಿಸಿತು.ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಮಂಗಳೂರು ತಾಲ್ಲೂಕಿನ ವಿವಿಧೆಡೆ ಮಳೆ ಸುರಿದಿದೆ.</p>.<p class="Subhead"><strong>ಶಿವಮೊಗ್ಗ–ರಸ್ತೆ ಜಲಾವೃತ:</strong>ಜಿಲ್ಲೆಯ ಕೆಲವೆಡೆ ಮಂಗಳವಾರ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ. ರಿಪ್ಪನ್ಪೇಟೆ, ಶಿಕಾರಿಪುರ, ಕೋಣಂದೂರು ಕಡೆ ಮಳೆಯಾಗಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನಲ್ಲಿ ಸಿಡಿಲು ಬಡಿದು ಒಂದು ಎತ್ತು ಮೃತಪಟ್ಟಿದೆ. ಹರಪನಹಳ್ಳಿ ತಾಲ್ಲೂಕಿನ ನಂದಿಬೇವೂರು ತಾಂಡಾ ಬಳಿ ರಸ್ತೆ ಜಲಾವೃತವಾಗಿದೆ.</p>.<p class="Subhead"><strong>ಕೊಡಗಿನಲ್ಲಿ ಧಾರಾಕಾರ ಮಳೆ: </strong>ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಕೆಲವೆಡೆ ಸೋಮವಾರ ರಾತ್ರಿ<br />ಹಾಗೂ ಮಂಗಳವಾರ ಮಳೆಯಾಗಿದೆ.ಕೊಡಗು ಜಿಲ್ಲೆಯಲ್ಲಿ ಮಡಿಕೇರಿ ಹುದಿಕೇರಿ, ನಾಪೋಕ್ಲು, ತಲಕಾವೇರಿ, ಭಾಗಮಂಡಲದಲ್ಲೂ ಉತ್ತಮ ಮಳೆಯಾಗಿದೆ.</p>.<p>ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಾಗಿದೆ. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಸಂಜೆ ಬಿರುಸಿನ ಮಳೆಯಾಗಿದೆ.</p>.<p class="Subhead"><strong>ಸಿಡಿದು ಬಡಿದು ರೈತ ಸಾವು(ಶಿರಾಳಕೊಪ್ಪ ವರದಿ): </strong>ಸಮೀಪದ ಕಾಡೇತ್ತಿನಹಳ್ಳಿ ಗ್ರಾಮದ ರೈತ ಕೆರಿಯಪ್ಪ (56) ಮಂಗಳ<br />ವಾರ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Subhead"><strong>ಈರುಳ್ಳಿಗೆ ಹಾನಿ(ಹುಬ್ಬಳ್ಳಿ ವರದಿ): </strong>ಮಂಗಳವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದ ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ನಂದಿಪುರ ಗ್ರಾಮದಲ್ಲಿ ಲಕ್ಷಾಂತರ ಮೌಲ್ಯದ ಈರುಳ್ಳಿಗೆ ಹಾನಿಯಾಗಿದೆ. ತಲಾ 60 ಕೆ.ಜಿಯ ಎರಡು ಸಾವಿರಕ್ಕೂ ಅಧಿಕ ಪಾಕೆಟ್ಗಳ ಈರುಳ್ಳಿ ನೀರಿಗೆ ಆಹುತಿಯಾಗಿವೆ.</p>.<p><strong>ಐದು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ</strong></p>.<p><strong>ಬೆಂಗಳೂರು:</strong> ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಏ.8ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಬುಧವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏ.9ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಗುಡುಗು ಸಿಡಿಲು ಹೆಚ್ಚಾಗಿರಲಿದ್ದು, ವೇಗವಾದ ಗಾಳಿ ಬೀಸಲಿದೆ.</p>.<p>ರಾಯಚೂರಿನಲ್ಲಿ ಮಂಗಳವಾರ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಮಂಡ್ಯ ಜಿಲ್ಲೆಯ ಬಸರಾಳು, ಯಳಂದೂರು, ಆನೇಕಲ್ನಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಶಿರಾಲಿ, ಬೆಂಗಳೂರಿನಲ್ಲಿ ತಲಾ 3, ಕೋಲಾರ, ದೊಡ್ಡಬಳ್ಳಾಪುರ, ಬರಗೂರು, ಕಡೂರು, ಮಾಗಡಿ, ಶ್ರೀರಂಗಪಟ್ಟಣ ತಲಾ 2, ಮಡಿಕೇರಿ, ಭಾಗಮಂಡಲ, ವಿರಾಜಪೇಟೆ, ಶ್ರವಣಬೆಳಗೊಳ, ಪಿರಿಯಾಪಟ್ಟಣ, ಕೊಳ್ಳೇಗಾಲ, ಮಳವಳ್ಳಿ, ಚಾಮರಾಜನಗರ, ನೆಲಮಂಗಲದಲ್ಲಿ ತಲಾ<br />1 ಸೆಂ.ಮೀ.ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳಲ್ಲಿ ಮಂಗಳವಾರ ಬಿರುಗಾಳಿ ಸಹಿತ ಮಳೆಯಾಗಿದೆ. ಹಿಂಗಾರು ಹಂಗಾಮಿಗೆ ಸಿದ್ಧತೆ ನಡೆಸಲು ರೈತರು ಮುಂದಾಗಿದ್ದಾರೆ.ಕಲಬುರ್ಗಿ ನಗರ ಸೇರಿದಂತೆ ಜಿಲ್ಲೆಯ ಸೇಡಂ, ಚಿಂಚೋಳಿ,ಕಾಳಗಿ, ಚಿತ್ತಾಪುರ, ಶಹಾಬಾದ್ ಹಾಗೂ ಯಡ್ರಾಮಿಯಲ್ಲಿ ಬಿರುಸಿನ ಮಳೆಯಾಯಿತು.</p>.<p>ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿನ ವಿವಿಧೆಡೆಸೋಮವಾರ ತಡರಾತ್ರಿ ಆಲಿಕಲ್ಲು ಮಳೆ ಸುರಿದು ಕೊಯ್ಲು ಹಂತದಲ್ಲಿದ್ದ ನೂರಾರು ಎಕರೆ ಭತ್ತ ಹಾಳಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ, ಕಾರಟಗಿ,ಹಿಟ್ನಾಳ ಹೋಬಳಿ, ಹುಲಿಗಿ ಮತ್ತು ಮುನಿರಾಬಾದ್ ವ್ಯಾಪ್ತಿಯಲ್ಲಿ ಮಳೆ ಸುರಿಯಿತು. ಹನುಮಸಾಗರದಲ್ಲಿ ಸಿಡಿಲಿಗೆ ಎತ್ತು ಬಲಿಯಾಗಿದೆ.</p>.<p>ಬೀದರ್ ಜಿಲ್ಲೆಯ ಬಸವಕಲ್ಯಾಣ, ಕಮಲನಗರದಲ್ಲಿ ಸೋಮವಾರ ತಡರಾತ್ರಿ ಮಳೆಯಾಗಿದೆ. ಔರಾದ್ನ ನಾಗೂರು (ಎಂ) ಗ್ರಾಮದಲ್ಲಿ ಸಿಡಿಲು ಬಡಿದು ಆಕಳು ಸಾವನ್ನಪ್ಪಿದೆ.ಯಾದಗಿರಿ ಜಿಲ್ಲೆಯ ಶಹಾಪುರ, ಸುರಪುರ, ಹುಣಸಗಿ, ಯರಗೋಳ, ಸೈದಾಪುರ, ವಡಗೇರಾದಲ್ಲಿಯೂ ಜಿಟಿ ಜಿಟಿ ಮಳೆಯಾಗಿದೆ.</p>.<p class="Subhead">ರೈತರಿಗೆ ಹರ್ಷ(ಚಿಕ್ಕಮಗಳೂರು ವರದಿ):ಮಲೆನಾಡು ಭಾಗದ ಕೊಪ್ಪ, ಬಾಳೆಹೊನ್ನೂರು, ಎನ್.ಆರ್.ಪುರ ಭಾಗದಲ್ಲಿಮಧ್ಯಾಹ್ನ ಸುಮಾರು ಅರ್ಧ ಗಂಟೆ ಉತ್ತಮ ಮಳೆಯಾಗಿದೆ. ರೈತರಲ್ಲಿ ಹರ್ಷ ಮೂಡಿಸಿದೆ.</p>.<p>ಹೆಬ್ರಿಯಲ್ಲಿ ಮಧ್ಯಾಹ್ನ ಅರ್ಧ ಗಂಟೆ, ಉಡುಪಿ, ಪಡುಬಿದ್ರಿ, ಬ್ರಹ್ಮಾವರ ಪ್ರದೇಶಗಳಲ್ಲಿ ಸಂಜೆ ಮಳೆ ಸುರಿದು ತಂಪಾಗಿಸಿತು.ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಮಂಗಳೂರು ತಾಲ್ಲೂಕಿನ ವಿವಿಧೆಡೆ ಮಳೆ ಸುರಿದಿದೆ.</p>.<p class="Subhead"><strong>ಶಿವಮೊಗ್ಗ–ರಸ್ತೆ ಜಲಾವೃತ:</strong>ಜಿಲ್ಲೆಯ ಕೆಲವೆಡೆ ಮಂಗಳವಾರ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ. ರಿಪ್ಪನ್ಪೇಟೆ, ಶಿಕಾರಿಪುರ, ಕೋಣಂದೂರು ಕಡೆ ಮಳೆಯಾಗಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನಲ್ಲಿ ಸಿಡಿಲು ಬಡಿದು ಒಂದು ಎತ್ತು ಮೃತಪಟ್ಟಿದೆ. ಹರಪನಹಳ್ಳಿ ತಾಲ್ಲೂಕಿನ ನಂದಿಬೇವೂರು ತಾಂಡಾ ಬಳಿ ರಸ್ತೆ ಜಲಾವೃತವಾಗಿದೆ.</p>.<p class="Subhead"><strong>ಕೊಡಗಿನಲ್ಲಿ ಧಾರಾಕಾರ ಮಳೆ: </strong>ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಕೆಲವೆಡೆ ಸೋಮವಾರ ರಾತ್ರಿ<br />ಹಾಗೂ ಮಂಗಳವಾರ ಮಳೆಯಾಗಿದೆ.ಕೊಡಗು ಜಿಲ್ಲೆಯಲ್ಲಿ ಮಡಿಕೇರಿ ಹುದಿಕೇರಿ, ನಾಪೋಕ್ಲು, ತಲಕಾವೇರಿ, ಭಾಗಮಂಡಲದಲ್ಲೂ ಉತ್ತಮ ಮಳೆಯಾಗಿದೆ.</p>.<p>ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಾಗಿದೆ. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಸಂಜೆ ಬಿರುಸಿನ ಮಳೆಯಾಗಿದೆ.</p>.<p class="Subhead"><strong>ಸಿಡಿದು ಬಡಿದು ರೈತ ಸಾವು(ಶಿರಾಳಕೊಪ್ಪ ವರದಿ): </strong>ಸಮೀಪದ ಕಾಡೇತ್ತಿನಹಳ್ಳಿ ಗ್ರಾಮದ ರೈತ ಕೆರಿಯಪ್ಪ (56) ಮಂಗಳ<br />ವಾರ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Subhead"><strong>ಈರುಳ್ಳಿಗೆ ಹಾನಿ(ಹುಬ್ಬಳ್ಳಿ ವರದಿ): </strong>ಮಂಗಳವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದ ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ನಂದಿಪುರ ಗ್ರಾಮದಲ್ಲಿ ಲಕ್ಷಾಂತರ ಮೌಲ್ಯದ ಈರುಳ್ಳಿಗೆ ಹಾನಿಯಾಗಿದೆ. ತಲಾ 60 ಕೆ.ಜಿಯ ಎರಡು ಸಾವಿರಕ್ಕೂ ಅಧಿಕ ಪಾಕೆಟ್ಗಳ ಈರುಳ್ಳಿ ನೀರಿಗೆ ಆಹುತಿಯಾಗಿವೆ.</p>.<p><strong>ಐದು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ</strong></p>.<p><strong>ಬೆಂಗಳೂರು:</strong> ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಏ.8ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಬುಧವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏ.9ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಗುಡುಗು ಸಿಡಿಲು ಹೆಚ್ಚಾಗಿರಲಿದ್ದು, ವೇಗವಾದ ಗಾಳಿ ಬೀಸಲಿದೆ.</p>.<p>ರಾಯಚೂರಿನಲ್ಲಿ ಮಂಗಳವಾರ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಮಂಡ್ಯ ಜಿಲ್ಲೆಯ ಬಸರಾಳು, ಯಳಂದೂರು, ಆನೇಕಲ್ನಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಶಿರಾಲಿ, ಬೆಂಗಳೂರಿನಲ್ಲಿ ತಲಾ 3, ಕೋಲಾರ, ದೊಡ್ಡಬಳ್ಳಾಪುರ, ಬರಗೂರು, ಕಡೂರು, ಮಾಗಡಿ, ಶ್ರೀರಂಗಪಟ್ಟಣ ತಲಾ 2, ಮಡಿಕೇರಿ, ಭಾಗಮಂಡಲ, ವಿರಾಜಪೇಟೆ, ಶ್ರವಣಬೆಳಗೊಳ, ಪಿರಿಯಾಪಟ್ಟಣ, ಕೊಳ್ಳೇಗಾಲ, ಮಳವಳ್ಳಿ, ಚಾಮರಾಜನಗರ, ನೆಲಮಂಗಲದಲ್ಲಿ ತಲಾ<br />1 ಸೆಂ.ಮೀ.ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>