<p><strong>ಕಾರವಾರ: </strong>ಹೊನ್ನಾವರ ಸುತ್ತಮುತ್ತ ಶನಿವಾರ ಬೆಳಿಗ್ಗೆ 11.20ರಿಂದ ಅರ್ಧ ಗಂಟೆ ಉತ್ತಮ ಮಳೆಯಾಯಿತು. ಅರ್ಧ ಗಂಟೆಯ ಅವಧಿಯಲ್ಲಿ ದಟ್ಟವಾದ ಮೋಡ ಕವಿದು, ಗುಡುಗು, ಸಿಡಿಲಿನ ಅಬ್ಬರವಿಲ್ಲದೇ ದಿಢೀರ್ ಆಗಿ ಮಳೆ ಶುರುವಾಯಿತು.</p>.<p>ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ನೂತನ ಕಟ್ಟಡಕ್ಕೆ ಶನಿವಾರ ಶಂಕುಸ್ಥಾಪನೆ ಹಮ್ಮಿಕೊಳ್ಳಲಾಗಿದೆ. ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಶಂಕುಸ್ಥಾಪನೆ ಮಾಡಲಿದ್ದಾರೆ. ಮಳೆಯಿಂದಾಗಿ ಕಾರ್ಯಕ್ರಮಕ್ಕೆ ಸ್ವಲ್ಪ ಅಡಚಣೆಯಾಯಿತು.</p>.<p><strong>ಬೆಳೆಗಾರರ ಆತಂಕ:</strong> ಜಿಲ್ಲೆಯಲ್ಲಿ ಈಗ ಅಡಿಕೆ ಕೊಯ್ಲು ಮಾಡಲಾಗಿದ್ದು, ಚಾಲಿ ಅಡಿಕೆಯನ್ನು ಬೆಳೆಗಾರರು ಅಂಗಳದಲ್ಲಿ ಒಣಗಿಸುತ್ತಿದ್ದಾರೆ. ಗೇರು ಬೆಳೆಯೂ ಹಲವೆಡೆ ಈಗ ಹೂ ಬಿಡುತ್ತಿದೆ. ಇದರಿಂದ ಬೆಳೆಗೆ ತೊಂದರೆಯಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ಹೊನ್ನಾವರ ಸುತ್ತಮುತ್ತ ಶನಿವಾರ ಬೆಳಿಗ್ಗೆ 11.20ರಿಂದ ಅರ್ಧ ಗಂಟೆ ಉತ್ತಮ ಮಳೆಯಾಯಿತು. ಅರ್ಧ ಗಂಟೆಯ ಅವಧಿಯಲ್ಲಿ ದಟ್ಟವಾದ ಮೋಡ ಕವಿದು, ಗುಡುಗು, ಸಿಡಿಲಿನ ಅಬ್ಬರವಿಲ್ಲದೇ ದಿಢೀರ್ ಆಗಿ ಮಳೆ ಶುರುವಾಯಿತು.</p>.<p>ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ನೂತನ ಕಟ್ಟಡಕ್ಕೆ ಶನಿವಾರ ಶಂಕುಸ್ಥಾಪನೆ ಹಮ್ಮಿಕೊಳ್ಳಲಾಗಿದೆ. ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಶಂಕುಸ್ಥಾಪನೆ ಮಾಡಲಿದ್ದಾರೆ. ಮಳೆಯಿಂದಾಗಿ ಕಾರ್ಯಕ್ರಮಕ್ಕೆ ಸ್ವಲ್ಪ ಅಡಚಣೆಯಾಯಿತು.</p>.<p><strong>ಬೆಳೆಗಾರರ ಆತಂಕ:</strong> ಜಿಲ್ಲೆಯಲ್ಲಿ ಈಗ ಅಡಿಕೆ ಕೊಯ್ಲು ಮಾಡಲಾಗಿದ್ದು, ಚಾಲಿ ಅಡಿಕೆಯನ್ನು ಬೆಳೆಗಾರರು ಅಂಗಳದಲ್ಲಿ ಒಣಗಿಸುತ್ತಿದ್ದಾರೆ. ಗೇರು ಬೆಳೆಯೂ ಹಲವೆಡೆ ಈಗ ಹೂ ಬಿಡುತ್ತಿದೆ. ಇದರಿಂದ ಬೆಳೆಗೆ ತೊಂದರೆಯಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>