ಬೆಂಗಳೂರು:ಆರ್ಥಿಕ ಸಂಕಷ್ಟದಲ್ಲಿರುವ ವಕೀಲರ ಕ್ಲರ್ಕ್ಗಳ ಆರ್ಥಿಕ ನೆರವಿಗೆ ಹಣ ಸಂಗ್ರಹಿಸಲು ಸಹಾಯ ಮಾಡುವಂತೆ ಬೆಂಗಳೂರು ವಕೀಲರ ಸಂಘಕ್ಕೆ ಹೈಕೋರ್ಟ್ ಸೂಚಿಸಿದೆ.
ಈ ಕುರಿತಂತೆ 'ಕರ್ನಾಟಕ ರಾಜ್ಯ ವಕೀಲರ ಕ್ಲರ್ಕ್ಗಳ ಸಂಘ' ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
'ಕ್ಲರ್ಕ್ಗಳ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವ ಹಾಗೂ ಅವರಿಗೆ ತುರ್ತು ಪರಿಹಾರ ನೀಡುವ ಸಂಬಂಧ ನಿಲುವು ತಿಳಿಸಿ' ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದ ನ್ಯಾಯಪೀಠ ಜೂನ್ 2ಕ್ಕೆ ವಿಚಾರಣೆ ಮುಂದೂಡಿದೆ.
ಅರ್ಜಿದಾರರ ಪರ ವಕೀಲ ಮೂರ್ತಿ ಎಸ್. ನಾಯಕ್ ವಾದ ಮಂಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.