ಮೊದಲ ಹಂತದಲ್ಲಿ ರಾಜ ಕಾಲುವೆಗಳ ಒತ್ತುವರಿ ತೆರವುಗೊಳಿಸುವುದು, ನಂತರ ಹೂಳು ತೆಗೆಯುವುದು, ನೀರು ಹರಿಯುವುದಕ್ಕೆ ಅಡಚಣೆ ಉಂಟುಮಾಡುವ, ಬೆಳೆದು ನಿಂತಿರುವ ಗಿಡ–ಗಂಟಿಗಳನ್ನು ತೆಗೆಸಲುಉದ್ದೇಶಿಸಲಾಗಿತ್ತು. ಕೊನೆಯ ಹಂತದಲ್ಲಿ ತಡೆಗೋಡೆಗಳನ್ನು ದುರಸ್ತಿ ಮಾಡಿ, ಕಾಂಕ್ರೀಟ್ನಿಂದ ಸುಭದ್ರಗೊಳಿಸಲು, ಅಗತ್ಯ ಇರುವ ಕಡೆಗಳಲ್ಲಿ ಹೊಸದಾಗಿ ಕಾಲುವೆಗಳನ್ನು ನಿರ್ಮಿಸಲು, ಕಾಂಕ್ರೀಟ್ ಗೋಡೆಗಳನ್ನು ಕಟ್ಟಿಸಲು ಕಾರ್ಯಯೋಜನೆ ಸಿದ್ಧಪಡಿಸಲಾಗಿತ್ತು.