ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ಮುಖಂಡ ರಾಜಣ್ಣ ಉಚ್ಛಾಟನೆಗೆ ಆಗ್ರಹ

Last Updated 28 ಮೇ 2019, 18:30 IST
ಅಕ್ಷರ ಗಾತ್ರ

‌ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಹಿರಿಯ ಮುಖಂಡ ಕೆ.ಎನ್. ರಾಜಣ್ಣ ಅವರನ್ನು ತಕ್ಷಣ ಉಚ್ಚಾಟಿಸುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ ಅವರಿಗೆ ತುಮಕೂರು ಜಿಲ್ಲಾ ಕಾಂಗ್ರೆಸ್ ಘಟಕ ಅಧ್ಯಕ್ಷ ರಾಮಕೃಷ್ಣಯ್ಯ‌ ದೂರು ನೀಡಿದ್ದಾರೆ.

ಜಿಲ್ಲೆಯ ಪಕ್ಷದ ಪ್ರಮುಖರ ಜೊತೆ ದಿನೇಶ್‌ ಗುಂಡೂರಾವ್‌ ಅವರನ್ನು ಮಂಗಳವಾರ ಭೇಟಿ ಮಾಡಿದ ರಾಮಕೃಷ್ಣಯ್ಯ, ‘ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ವಿರುದ್ಧ ರಾಜಣ್ಣ ಕೆಲಸ ಮಾಡಿದ್ದಾರೆ. ಅಂಥವರು ಕಾಂಗ್ರೆಸ್‌ಲ್ಲಿದ್ದರೆ ಪಕ್ಷ ಸಂಘಟನೆ ಕಷ್ಟ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

‘ಜೀರೊ ಟ್ರಾಫಿಕ್ ನಾಯಕನಿಂದ ದೇವೇಗೌಡರು ಸೋಲು ಕಂಡಿದ್ದಾರೆ ಎಂದು ರಾಜಣ್ಣ ಈ ಹಿಂದೆ ಹೇಳಿಕೆ ನೀಡಿದ್ದರು. ಜಿಲ್ಲಾ ಘಟಕದ ಅಧ್ಯಕ್ಷರನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ’ ಎಂದು ಸಹ ರಾಮಕೃಷ್ಣಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT