ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಸ್ಥಿರ ಜಲ ನಿರ್ವಹಣೆ ಅಗತ್ಯ: ಜಲತಜ್ಞ ರಾಜೇಂದ್ರ ಸಿಂಗ್

Last Updated 18 ನವೆಂಬರ್ 2018, 20:24 IST
ಅಕ್ಷರ ಗಾತ್ರ

ಬೆಂಗಳೂರು: ಸತತ ಬರಗಾಲ ಎದುರಿಸುತ್ತಿರುವ ರಾಜ್ಯದಲ್ಲಿ ಸುಸ್ಥಿರ ಜಲ ನಿರ್ವಹಣೆಗೆ ಒತ್ತು ನೀಡುವ ಅಗತ್ಯವಿದೆ ಎಂದು ರೇಮನ್ ಮ್ಯಾಗಸೆಸ್ ಪ್ರಶಸ್ತಿ ಪುರಸ್ಕೃತ ಜಲತಜ್ಞ ರಾಜೇಂದ್ರ ಸಿಂಗ್ ಅಭಿಪ್ರಾಯಪಟ್ಟರು.

ತಮ್ಮ ತಂಡದ ಜೊತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭಾನುವಾರ ಭೇಟಿ ಮಾಡಿದ ಅವರು. ನೀರಿನ ಸುಸ್ಥಿರ ನಿರ್ವಹಣೆ ಕುರಿತು ಚರ್ಚಿಸಿದರು.

ನಾಗರಿಕ ಸಮಾಜದಲ್ಲಿ ರೈತರು, ವಿದ್ಯಾರ್ಥಿಗಳು, ಕೈಗಾರಿಕೋದ್ಯಮಿಗಳು ಮತ್ತು ಇತರರು, ಜಲ ಸಾಕ್ಷರರಾಗುವ ಅಗತ್ಯವಿದೆ ಎಂದು ಸಿಂಗ್ ಪ್ರತಿಪಾದಿಸಿದರು.

ಸಿಂಗ್ ಅವರ ಅಭಿಪ್ರಾಯಗಳನ್ನು ಅನುಮೋದಿಸಿದ ಮುಖ್ಯಮಂತ್ರಿ, 75 ಲಕ್ಷ ಜನರನ್ನು ಸಮುದಾಯ ಕೃಷಿಯಲ್ಲಿ ತೊಡಗಿಸಲು ಚಿಂತನೆ ನಡೆಸಲಾಗಿದೆ ಎಂದು ವಿವರಿಸಿದರು.

ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು ರಾಜ್ಯದ ಜಲ ಸಂಪನ್ಮೂಲದ ವೈಜ್ಞಾನಿಕ ಬಳಕೆಗೆ ಆದ್ಯತೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಜಲ ಸಾಕ್ಷರತೆ ಕಾರ್ಯಕ್ರಮಕ್ಕೆ ಸರ್ಕಾರ ಸಕಾರಾತ್ಮಕವಾಗಿ ಚಿಂತನೆ ನಡೆಸಿದೆ ಎಂದರು.

ಹಿರಿಯ ಪತ್ರಕರ್ತ ಆರ್.ಪಿ. ವೆಂಕಟೇಶ್ ಮೂರ್ತಿ, ಚಿತ್ರ ನಿರ್ದೇಶಕ ಎನ್.ಆರ್. ನಂಜುಂಡೇಗೌಡ ಹಾಗೂ ವಿಜಯಪುರದ ರೈತ ಮುಖಂಡ ಅಪ್ಪಾಸಾಹೇಬ್ ಯರ್ನಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT