ಅಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30 ರವರೆಗೆ ಸಮಾವೇಶ ನಡೆಯಲಿದ್ದು, ಮಧ್ಯಾಹ್ನ 3.30ಕ್ಕೆ ನಗರದ ಟಿಎಂಎ ಪೈ ಸಭಾಂಗಣದಲ್ಲಿ ಸಿಂಗ್ ಅವರು, ಉದ್ಯಮಿಗಳು, ವೈದ್ಯರು, ಬುದ್ಧಿಜೀವಿಗಳ ಜತೆಗೆ ಸಂವಾದ ನಡೆಸಲಿದ್ದಾರೆ. ಲೋಕಸಭೆ ಚುನಾವಣಾ ಸಿದ್ಧತೆ ಕುರಿತಂತೆ ಸಮಾವೇಶದಲ್ಲಿ ಮಾಹಿತಿ ನೀಡಲಾಗುವುದು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ತಿಳಿಸಿದರು.