<p><strong>ಬೆಂಗಳೂರು:</strong> ಇದೇ 19 ರಂದು ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ತನ್ನ ಪಾಲಿಗೆ ದಕ್ಕಿರುವಒಂದು ಸ್ಥಾನಕ್ಕೆ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್ ನಿರ್ಧರಿಸಿದೆ.</p>.<p>ಕರ್ನಾಟಕ ವಿಧಾನಸಭಾ ಸದಸ್ಯರಿಂದ ಆಯ್ಕೆಯಾಗಬೇಕಾದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಎರಡು ಸ್ಥಾನಗಳು ಬಿಜೆಪಿ ಮತ್ತು ಒಂದು ಸ್ಥಾನ ಕಾಂಗ್ರೆಸ್ಗೆ ಸಿಗಲಿದೆ. ಅಗತ್ಯ ಸಂಖ್ಯಾ ಬಲ ಹೊಂದಿಲ್ಲದ ಜೆಡಿಎಸ್, ತಮ್ಮ ಪಕ್ಷದ ನಾಯಕ ಎಚ್.ಡಿ.ದೇವೇಗೌಡರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ.</p>.<p>ಶುಕ್ರವಾರ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಗೌಡರನ್ನು ಕಣಕ್ಕಿಳಿಸಲು ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಗಿದೆ. ‘ಸ್ಪರ್ಧೆಗೆ ದೇವೇಗೌಡರು ಇನ್ನೂ ಒಪ್ಪಿಗೆ ಸೂಚಿಸಿಲ್ಲ’ ಎಂದು ಆ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.</p>.<p>‘ದೇವೇಗೌಡರನ್ನು ಬೆಂಬಲಿಸುವಂತೆ ಕಾಂಗ್ರೆಸ್ಗೆ ಮನವಿ ಮಾಡಿಲ್ಲ. ಗೌಡರು ಸ್ಪರ್ಧಿಸಿದರೆ ಪಕ್ಷಾತೀತವಾಗಿ ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ’ ಎಂದರು.</p>.<p>ಅಭ್ಯರ್ಥಿ ಆಯ್ಕೆಗಾಗಿ ಬಿಜೆಪಿಯ ಪ್ರಮುಖ ನಾಯಕರ ಸಭೆ ಶನಿವಾರ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇದೇ 19 ರಂದು ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ತನ್ನ ಪಾಲಿಗೆ ದಕ್ಕಿರುವಒಂದು ಸ್ಥಾನಕ್ಕೆ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್ ನಿರ್ಧರಿಸಿದೆ.</p>.<p>ಕರ್ನಾಟಕ ವಿಧಾನಸಭಾ ಸದಸ್ಯರಿಂದ ಆಯ್ಕೆಯಾಗಬೇಕಾದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಎರಡು ಸ್ಥಾನಗಳು ಬಿಜೆಪಿ ಮತ್ತು ಒಂದು ಸ್ಥಾನ ಕಾಂಗ್ರೆಸ್ಗೆ ಸಿಗಲಿದೆ. ಅಗತ್ಯ ಸಂಖ್ಯಾ ಬಲ ಹೊಂದಿಲ್ಲದ ಜೆಡಿಎಸ್, ತಮ್ಮ ಪಕ್ಷದ ನಾಯಕ ಎಚ್.ಡಿ.ದೇವೇಗೌಡರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ.</p>.<p>ಶುಕ್ರವಾರ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಗೌಡರನ್ನು ಕಣಕ್ಕಿಳಿಸಲು ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಗಿದೆ. ‘ಸ್ಪರ್ಧೆಗೆ ದೇವೇಗೌಡರು ಇನ್ನೂ ಒಪ್ಪಿಗೆ ಸೂಚಿಸಿಲ್ಲ’ ಎಂದು ಆ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.</p>.<p>‘ದೇವೇಗೌಡರನ್ನು ಬೆಂಬಲಿಸುವಂತೆ ಕಾಂಗ್ರೆಸ್ಗೆ ಮನವಿ ಮಾಡಿಲ್ಲ. ಗೌಡರು ಸ್ಪರ್ಧಿಸಿದರೆ ಪಕ್ಷಾತೀತವಾಗಿ ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ’ ಎಂದರು.</p>.<p>ಅಭ್ಯರ್ಥಿ ಆಯ್ಕೆಗಾಗಿ ಬಿಜೆಪಿಯ ಪ್ರಮುಖ ನಾಯಕರ ಸಭೆ ಶನಿವಾರ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>