ಹುಬ್ಬಳ್ಳಿ: ರಾಜ್ಯಸಭೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಪಕ್ಷದಲ್ಲಿ ಯಾರಿಗೂ ಅಸಮಾಧಾನವಿಲ್ಲ ಎಂದು ಮಧ್ಯಮ ಹಾಗೂ ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಮಂಗಳವಾರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗಿದೆ. ಆಕಾಂಕ್ಷಿಗಳಾಗಿದ್ದ ಪ್ರಭಾಕರ ಕೋರೆ, ರಮೇಶ ಕತ್ತಿಯವರೂ ಅಸಮಾಧಾನ ವ್ಯಕ್ತಪಡಿಸಿಲ್ಲ’ ಎಂದರು.