ರೈತರ ಹಿತ ಕಾಪಾಡಬೇಕಾದ ಸರ್ಕಾರಗಳು, ಅವರ ಬೆನ್ನು ಮುರಿಯುವ ಕೆಲಸ ಮಾಡುತ್ತಿವೆ. ಕೃಷಿಕರಿಗೆ ನೀರು, ವಿದ್ಯುತ್, ಬೆಳೆಗೆ ಬೆಂಬಲ ಬೆಲೆ ನೀಡಿದರೆ, ಸಾಲಮನ್ನಾ ಮಾಡಿ ಎಂದು ರೈತರು ಕೇಳುವುದಿಲ್ಲ. ಹಾಗಾಗಿ ಸರ್ಕಾರಗಳು ಕೆರೆಗಳನ್ನು ತುಂಬಿಸುವ ಹೊಣೆಗಾರಿಕೆ ಮೊದಲು ಮಾಡಬೇಕು. ಇದರಿಂದ ಅಂತರ್ಜಲ ವೃದ್ಧಿಯಾಗಿ, ಕೃಷಿ ಚಟುವಟಿಕೆ ಅಭಿವೃದ್ಧಿಯಾಗುತ್ತದೆ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.