ಬೆಂಗಳೂರು: ರಾಜ್ಯ ಸರ್ಕಾರ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇದೇ 29 ರಂದು ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್.ಆರ್.ವಿಶುಕುಮಾರ್ ತಿಳಿಸಿದರು.
ಅಲ್ಲದೆ, ಇದೇ 27 ರಂದು ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ನ.1 ರಂದು ಉಪಚುನಾವಣಾ ನೀತಿ ಸಂಹಿತೆ ಇದ್ದ ಕಾರಣ ಪ್ರಶಸ್ತಿ ಪ್ರದಾನವನ್ನು ಮುಂದೂಡಲಾಗಿತ್ತು. ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿಯನ್ನೂ ಬಿಡುಗಡೆ ಮಾಡಿರಲಿಲ್ಲ.