ಹುಬ್ಬಳ್ಳಿ/ಗದಗ:ಹುಬ್ಬಳ್ಳಿ ಹಾಗೂ ಗದುಗಿನಲ್ಲಿ ಭಾನುವಾರ ನಡೆದ ವಿಶ್ವ ಹಿಂದೂ ಪರಿಷತ್ ಜನಾಗ್ರಹ ಸಭೆಯಲ್ಲಿ, ಅಯೋಧ್ಯೆಯಲ್ಲಿಯೇ ರಾಮಮಂದಿರ ನಿರ್ಮಾಣದ ಸಂಕಲ್ಪ ಮಾಡಲಾಯಿತು.ಮಂದಿರ ನಿರ್ಮಾಣದ ಕಾನೂನನ್ನು ಜಾರಿ ಮಾಡಿದರೆ, ಎಲ್ಲ ಪಕ್ಷಗಳು ಅದಕ್ಕೆ ಬೆಂಬಲ ನೀಡುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಯನ್ನು ಗೌರವಿಸಬೇಕು ಎಂದೂ ಆಗ್ರಹಿಸಲಾಯಿತು.