ಇಲ್ಲಿ ಶನಿವಾರ ಸಿಎಎ, ಎನ್ಆರ್ಸಿ, ಎನ್ಪಿಆರ್ ವಿರೋಧಿಸಿ ನಡೆದ ಜನಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ‘ಮುಸ್ಲಿಂ ಧರ್ಮೀಯರನ್ನು ದ್ವೇಷಿಸುವುದೇ ಬಿಜೆಪಿಯವರಿಗೆ ರಾಷ್ಟ್ರೀಯತೆ ಆಗಿದೆ. ಧರ್ಮ ಧರ್ಮಗಳ ನಡುವೆ ದ್ವೇಷದ ಬೀಜ ಬಿತ್ತಿ ತಮ್ಮ ರಾಜಕಾರಣದ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾರೆ. ದೇಶದಲ್ಲಿ ಕೋಮುಗಲಭೆ ಸೃಷ್ಟಿಗೆ ಪುಷ್ಠಿ ನೀಡುತ್ತಿದ್ದಾರೆ’ ಎಂದು ದೂರಿದರು.