ಸಂವಿಧಾನ ಉಳಿಸಿ ಹೋರಾಟ ಸಮಿತಿ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಸಂವಿಧಾನ ಮತ್ತು ಸಮಕಾಲೀನ ಸಂದರ್ಭ’ ವಿಚಾರಸಂಕಿರಣ ಉದ್ಘಾಟಿಸಿದ ಅವರು, ‘ಇಂದು ದೇಶದಲ್ಲಿ ಪ್ರತಿಮೆ ಸ್ಥಾಪನೆಯ ಸ್ಪರ್ಧೆ ನಡೆಯುತ್ತಿದೆ. ಒಂದಕ್ಕಿಂತ ಒಂದು ದೊಡ್ಡ ಪ್ರತಿಮೆ ನಿರ್ಮಿಸಲಾಗುತ್ತಿದೆ. ದೇವರು, ಧರ್ಮ, ಸಂಸ್ಕೃತಿಯನ್ನು ಮಾರುಕಟ್ಟೆಯ ಸರಕನ್ನಾಗಿ ಮಾಡಲಾಗಿದೆ’ ಎಂದು ಕಳವಳ ವ್ಯಕ್ತಪಡಿಸಿದರು.