ಬೆಂಗಳೂರು: ಹಿರಿಯ ಪತ್ರಕರ್ತ ಸಿ.ಎಂ. ರಾಮಚಂದ್ರ (96) ಜಯನಗರದ ನಿವಾಸದಲ್ಲಿ ಶುಕ್ರವಾರ ಬೆಳಿಗ್ಗೆ ನಿಧನರಾದರು. ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು.
‘ದಿ ಹಿಂದೂ’ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸಿದ್ದ ಅವರು, ಮೌಲಿಕ ಮತ್ತು ವಸ್ತುನಿಷ್ಠ ಬರಹಗಳಿಗೆ ಹೆಸರಾಗಿದ್ದರು. ಅವರು ರಚಿಸಿದ್ದ ‘ಕಾಕ್ಪಿಟ್ ಆಫ್ ಇಂಡಿಯಾ’ಸ್ ಪೊಲಿಟಿಕಲ್ ಬ್ಯಾಟಲ್ಸ್–ಕರ್ನಾಟಕ’ ಎಂಬ ಪುಸ್ತಕ ಕಳೆದ ಮೇನಲ್ಲಿ ಬಿಡುಗಡೆಯಾಗಿತ್ತು.
ಕರ್ನಾಟಕ ಪತ್ರಿಕಾ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಗೌರವ–ಪುರಸ್ಕಾರಗಳಿಗೆ ಅವರು ಭಾಜನರಾಗಿದ್ದರು.