ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಟ್ರಬಲ್‌ ಶೂಟರ್‌’ ಪಾತ್ರಕ್ಕೆ ಕೃತಜ್ಞತೆ

ಕುಮಾರಸ್ವಾಮಿ–ರಾಮಲಿಂಗಾ ರೆಡ್ಡಿ ಭೇಟಿ
Last Updated 25 ಜುಲೈ 2019, 19:27 IST
ಅಕ್ಷರ ಗಾತ್ರ

ಬೆಂಗಳೂರು: ಉಸ್ತುವಾರಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಗುರುವಾರ ಕಾಂಗ್ರೆಸ್‌ ಶಾಸಕ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಿದ್ದು, ಕೊನೆಯ ಹಂತದಲ್ಲಿ ಅತೃಪ್ತ ಶಾಸಕರನ್ನು ಸಂಪರ್ಕಿಸಿ, ಅವರ ನಿಲುವು ತಿಳಿದುಕೊಳ್ಳಲು ನೆರವಾಗಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.

‘ಪಕ್ಷದಲ್ಲಿ ನಿಮ್ಮ ಹಿರಿತನಕ್ಕೆ ಬೆಲೆ ಕೊಟ್ಟಿಲ್ಲ ಎಂಬ ಬಗ್ಗೆ ನನಗೂ ನೋವಿದೆ. ಡಿ.ಕೆ.ಶಿವಕುಮಾರ್‌ ಅವರು ಮುಂಬೈಗೆ ಹೋಗಿದ್ದರೂ ಅತೃಪ್ತ ಶಾಸಕರನ್ನು ಸಂಪರ್ಕಿಸುವುದು ಸಾಧ್ಯವಾಗಿರಲಿಲ್ಲ.ಆದರೆ ನೀವು ಕೊನೆಯ ಹಂತದಲ್ಲಿ ಅತೃಪ್ತರನ್ನು ಸಂಪರ್ಕಿಸಿ ಅವರ ನಿಲುವನ್ನು ಸ್ಪಷ್ಟವಾಗಿ ತಿಳಿಯುವ ಕೆಲಸ ಮಾಡಿದ್ದೀರಿ’ ಎಂದು ಕುಮಾರಸ್ವಾಮಿ ಹೇಳಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ. ಶಾಸಕಿ ಸೌಮ್ಯಾ ರೆಡ್ಡಿ ಸಹ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT