<p><strong>ಬೆಂಗಳೂರು: </strong>ರಾಜ್ಯಸಭೆಯ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಗುರುವಾರ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.</p>.<p>ಇತರ ಇಬ್ಬರು ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳು ಸೂಚಕರಿಲ್ಲದೆ ತಿರಸ್ಕೃತಗೊಂಡಿದ್ದವು. ನಾಮಪತ್ರ ವಾಪಸ್ಗೆ ಗುರುವಾರ ಕೊನೆಯ ದಿನವಾಗಿತ್ತು. ರಾಮಮೂರ್ತಿ ಅವರೊಬ್ಬರೇ ಕಣದಲ್ಲಿ ಉಳಿದಿದ್ದರಿಂದ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣೆ ಅಧಿಕಾರಿಯೂ ಆದ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಿಸಿದರು.</p>.<p>ವಿಧಾನಸಭೆಯಲ್ಲಿ ಸಂಖ್ಯಾಬಲದ ಕೊರತೆಯಿಂದಾಗಿ ಕಾಂಗ್ರೆಸ್, ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರಲಿಲ್ಲ. ಹಾಗಾಗಿಅವಿರೋಧ ಆಯ್ಕೆಗೆ ದಾರಿ ಸುಗಮವಾಗಿತ್ತು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/k-c-ramamurthy-resigns-his-674224.html" target="_blank">ರಾಜ್ಯಸಭೆ, ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಸಿ.ರಾಮಮೂರ್ತಿ</a></p>.<p>2016ರಲ್ಲಿ ಕಾಂಗ್ರೆಸ್ನಿಂದ ರಾಜ್ಯಸಭೆಗೆ ಆಯ್ಕೆ ಆಗಿದ್ದಕೆ.ಸಿ.ರಾಮಮೂರ್ತಿಈಚೆಗೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಉಪಚುನಾವಣೆ ಎದುರಾಗಿತ್ತು. ಪಕ್ಷಕ್ಕೂ ರಾಜೀನಾಮೆ ನೀಡಿ ಹೊರಬಂದಿದ್ದ ಅವರುನಂತರ ಬಿಜೆಪಿಗೆ ಸೇರಿದ್ದರು. ಬಿಜೆಪಿ ವರಿಷ್ಠರು ಮತ್ತೆ ಅವರನ್ನೇ ಕಣಕ್ಕಿಳಿದಿದ್ದರು. ಇವರ ಅಧಿಕಾರ ಅವಧಿ 2022 ಜೂನ್ 30ರವರೆಗೆ ಇರುತ್ತದೆ.</p>.<p>‘ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಗಳಿಂದ ಪ್ರೇರಿತನಾಗಿ ಬಿಜೆಪಿ ಸೇರಿದೆ. ಈ ಮೊದಲು ಬಿಜೆಪಿ ಸ್ನೇಹಿತರ ಜತೆಗೆ ಒಡನಾಟ ಚೆನ್ನಾಗಿತ್ತು. ಇನ್ನು ಮುಂದೆ ಅವರ ಜತೆಯಲ್ಲಿ ಸೇರಿ ಅಭಿವೃದ್ಧಿ ಕೆಲಸ ಮಾಡುತ್ತೇನೆ’ ಎಂದರು.</p>.<p>‘ಪಕ್ಷ ಬಿಡುವಾಗ ಶಾಸಕ ಡಿ.ಕೆ.ಶಿವಕುಮಾರ್ ಅವರಿಗೆ ಹೇಳಬೇಕು ಎಂದೇನಿಲ್ಲ. ಈಗ ಅವರಿಗೆ ಎಲ್ಲವೂ ಗೊತ್ತಾಗಿರುತ್ತದೆ’ ಎಂದು ಕುಟುಕಿದರು.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಮಮೂರ್ತಿ ಅವರನ್ನು ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯಸಭೆಯ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಗುರುವಾರ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.</p>.<p>ಇತರ ಇಬ್ಬರು ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳು ಸೂಚಕರಿಲ್ಲದೆ ತಿರಸ್ಕೃತಗೊಂಡಿದ್ದವು. ನಾಮಪತ್ರ ವಾಪಸ್ಗೆ ಗುರುವಾರ ಕೊನೆಯ ದಿನವಾಗಿತ್ತು. ರಾಮಮೂರ್ತಿ ಅವರೊಬ್ಬರೇ ಕಣದಲ್ಲಿ ಉಳಿದಿದ್ದರಿಂದ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣೆ ಅಧಿಕಾರಿಯೂ ಆದ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಿಸಿದರು.</p>.<p>ವಿಧಾನಸಭೆಯಲ್ಲಿ ಸಂಖ್ಯಾಬಲದ ಕೊರತೆಯಿಂದಾಗಿ ಕಾಂಗ್ರೆಸ್, ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರಲಿಲ್ಲ. ಹಾಗಾಗಿಅವಿರೋಧ ಆಯ್ಕೆಗೆ ದಾರಿ ಸುಗಮವಾಗಿತ್ತು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/k-c-ramamurthy-resigns-his-674224.html" target="_blank">ರಾಜ್ಯಸಭೆ, ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಸಿ.ರಾಮಮೂರ್ತಿ</a></p>.<p>2016ರಲ್ಲಿ ಕಾಂಗ್ರೆಸ್ನಿಂದ ರಾಜ್ಯಸಭೆಗೆ ಆಯ್ಕೆ ಆಗಿದ್ದಕೆ.ಸಿ.ರಾಮಮೂರ್ತಿಈಚೆಗೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಉಪಚುನಾವಣೆ ಎದುರಾಗಿತ್ತು. ಪಕ್ಷಕ್ಕೂ ರಾಜೀನಾಮೆ ನೀಡಿ ಹೊರಬಂದಿದ್ದ ಅವರುನಂತರ ಬಿಜೆಪಿಗೆ ಸೇರಿದ್ದರು. ಬಿಜೆಪಿ ವರಿಷ್ಠರು ಮತ್ತೆ ಅವರನ್ನೇ ಕಣಕ್ಕಿಳಿದಿದ್ದರು. ಇವರ ಅಧಿಕಾರ ಅವಧಿ 2022 ಜೂನ್ 30ರವರೆಗೆ ಇರುತ್ತದೆ.</p>.<p>‘ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಗಳಿಂದ ಪ್ರೇರಿತನಾಗಿ ಬಿಜೆಪಿ ಸೇರಿದೆ. ಈ ಮೊದಲು ಬಿಜೆಪಿ ಸ್ನೇಹಿತರ ಜತೆಗೆ ಒಡನಾಟ ಚೆನ್ನಾಗಿತ್ತು. ಇನ್ನು ಮುಂದೆ ಅವರ ಜತೆಯಲ್ಲಿ ಸೇರಿ ಅಭಿವೃದ್ಧಿ ಕೆಲಸ ಮಾಡುತ್ತೇನೆ’ ಎಂದರು.</p>.<p>‘ಪಕ್ಷ ಬಿಡುವಾಗ ಶಾಸಕ ಡಿ.ಕೆ.ಶಿವಕುಮಾರ್ ಅವರಿಗೆ ಹೇಳಬೇಕು ಎಂದೇನಿಲ್ಲ. ಈಗ ಅವರಿಗೆ ಎಲ್ಲವೂ ಗೊತ್ತಾಗಿರುತ್ತದೆ’ ಎಂದು ಕುಟುಕಿದರು.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಮಮೂರ್ತಿ ಅವರನ್ನು ಅಭಿನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>